ತೆಲಂಗಾಣ, ತಮಿಳುನಾಡು ಸೇರಿ ಕೋವಿಡ್-19 ಉಲ್ಬಣಗೊಂಡಿರುವ 7 ರಾಜ್ಯಗಳಿಗೆ ಕೇಂದ್ರದ ತಂಡ ರವಾನೆ

ಕೋವಿಡ್-19 ಪ್ರಕರಣಗಳು ನಿಯಂತ್ರಣಕ್ಕೆ ಬಾರದೇ ಉಲ್ಬಣಗೊಳ್ಳುತ್ತಿರುವ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳ ತಂಡ ಕಳಿಸಲು ತೀರ್ಮಾನಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಕೋವಿಡ್-19 ಪ್ರಕರಣಗಳು ನಿಯಂತ್ರಣಕ್ಕೆ ಬಾರದೇ ಉಲ್ಬಣಗೊಳ್ಳುತ್ತಿರುವ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳ ತಂಡ ಕಳಿಸಲು ತೀರ್ಮಾನಿಸಿದೆ. 

ಗುಜರಾತ್, ತಮಿಳುನಾಡು, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಪಂಜಾಬ್, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಕೊರೋನಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಪ್ರದೇಶಗಳಿಗೆ ಅಗತ್ಯವಿರುವ ಸಹಕಾರ ನೀಡುವುದಕ್ಕಾಗಿ ಕೇಂದ್ರ ಸರ್ಕಾರ ಅಧಿಕಾರಿಗಳು, ತಜ್ಞರ ತಂಡವನ್ನು ಕಳಿಸಲಿದೆ. 

ಕೇಂದ್ರ ಆರೋಗ್ಯ-ಕುಟುಂಬ ಕಲ್ಯಾಣ ಸಚಿವಾಲಯದಿಂದ ಹಿರಿಯ ಅಧಿಕಾರಿ, ಜಂಟಿ ಕಾರ್ಯದರ್ಶಿ ಮಟ್ಟದ ನೋಡಲ್ ಅಧಿಕಾರಿ, ಸಾರ್ವಜನಿಕ ಆರೋಗ್ಯ ತಜ್ಞರನ್ನೊಳಗೊಂಡ ತಂಡ ಇದಾಗಿರಲಿದೆ. ಕೋವಿಡ್-19 ಪ್ರಕರಣಗಳನ್ನು ನಿಯಂತ್ರಿಸುವುದಕ್ಕೆ ರಾಜ್ಯ ಆರೋಗ್ಯ ಇಲಾಖೆಗಳಿಗೆ ಈ ತಂಡ ಸಹಕಾರಿಯಾಗಲಿದೆ.

ಕೊರೋನ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕಾಗಿ ಈ ಹಿಂದೆಯೂ ಕೇಂದ್ರ ಸರ್ಕಾರ ಸಾರ್ವಜನಿಕ ಆರೋಗ್ಯ ತಜ್ಞರನ್ನೊಳಗೊಂಡ 20 ತಂಡಗಳನ್ನು ಕಳಿಸಿತ್ತು. 

ಇದಕ್ಕೂ ಮುನ್ನ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಅವರ ನೇತೃತ್ವದ ತಂಡವನ್ನು ಮುಂಬೈ ಗೆ ಕಳಿಸಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com