ಶ್ರೀನಗರದಲ್ಲಿ ಎನ್ ಕೌಂಟರ್: ಇಬ್ಬರು ಯೋಧರಿಗೆ ಗಾಯ, ಮೊಬೈಲ್, ಇಂಟರ್ನೆಟ್ ಸೇವೆ ಕಡಿತ

ಇಲ್ಲಿನ ನವಕದಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಎನ್ ಕೌಂಟರ್ ನಲ್ಲಿ ಇಬ್ಬರು ಭದ್ರತಾ ಪಡೆ ಯೋಧರಿಗೆ ಗಾಯವಾಗಿದೆ. ಸದ್ಯ ಆ ಭಾಗದಲ್ಲಿ ಮೊಬೈಲ್ , ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಇಲ್ಲಿನ ನವಕದಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಎನ್ ಕೌಂಟರ್ ನಲ್ಲಿ ಇಬ್ಬರು ಭದ್ರತಾ ಪಡೆ ಯೋಧರಿಗೆ ಗಾಯವಾಗಿದೆ. ಸದ್ಯ ಆ ಭಾಗದಲ್ಲಿ ಮೊಬೈಲ್ , ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ.

ಶ್ರೀನಗರದ ಕನೆಮಝರ್ ನವಕದಲ್ ಪ್ರದೇಶದಲ್ಲಿ ಉಗ್ರಗಾಮಿಗಳ ಇರುವಿಕೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಶೋಧಕಾರ್ಯ ನಡೆಸಿದರು. ಪೊಲೀಸರು ಪ್ರದೇಶವನ್ನು ಸುತ್ತುವರಿದಾಗ ಉಗ್ರರು ದಾಳಿ ಮಾಡಲಾರಂಭಿಸಿದರು. ಈ ಸಮಯದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಜವಾನ ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ನಸುಕಿನ ಜಾವ 2 ಗಂಟೆ ಸುಮಾರಿಗೆ ಎನ್ ಕೌಂಟರ್ ಆರಂಭವಾಗಿದ್ದು ಸುಮಾರು 5 ಗಂಟೆಗಳ ಕಾಲ ದಾಳಿ ಮುಂದುವರಿಯಿತು.

ಬಿಎಸ್ ಎನ್ ಎಲ್ ಪೋಸ್ಟ್ ಪೇಯ್ಡ್ ಹೊರತುಪಡಿಸಿ ಮೊಬೈಲ್ ಇಂಟರ್ನೆಟ್ ಮತ್ತು ಮೊಬೈಲ್ ಟೆಲಿಫೋನ್ ಸೇವೆಗಳನ್ನು ಜಮ್ಮು-ಕಾಶ್ಮೀರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಗಿತಗೊಳಿಸಲಾಗಿದೆ.ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸಿಆರ್ ಪಿಎಫ್ ಕಾರ್ಯನಿರತವಾಗಿದ್ದಾರೆ. ಹೆಚ್ಚಿನ ವಿವರ ತಿಳಿದುಬಂದಿಲ್ಲ.

ಕಳೆದ ಏಪ್ರಿಲ್ 28ರಂದು ಶೋಪಿಯಾನ್ ಜಿಲ್ಲೆಯ ಝೈನಪೊರಾ ಪ್ರದೇಶದಲ್ಲಿ ಎನ್ ಕೌಂಟರ್ ನಡೆದು ಮೂವರು ಉಗ್ರರು ಹತರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com