ಡಾ.ಜಿತೇಂದ್ರ ನಾಥ್ ಪಾಂಡೆ
ದೇಶ
ದೆಹಲಿ: ಏಮ್ಸ್ ಹಿರಿಯ ವೈದ್ಯ ಮಹಾಮಾರಿ ಕೊರೋನಾಗೆ ಬಲಿ
ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ದೆಹಲಿಯ ಆಲ್ ಇಂಡಿಯಾ ಇನ್'ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್'ನ ಹಿರಿಯ ವೈದ್ಯರೊಬ್ಬರು ಬಲಿಯಾಗಿದ್ದಾರೆಂದು ತಿಳಿದುಬಂದಿದೆ.
ನವದೆಹಲಿ: ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ದೆಹಲಿಯ ಆಲ್ ಇಂಡಿಯಾ ಇನ್'ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್'ನ ಹಿರಿಯ ವೈದ್ಯರೊಬ್ಬರು ಬಲಿಯಾಗಿದ್ದಾರೆಂದು ತಿಳಿದುಬಂದಿದೆ.
ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದ ಪ್ರೀಮಿಯರ್ ಆಸ್ಪತ್ರೆಯ ಮುಖ್ಯಸ್ಥರಾಗಿದ್ದ ಡಾ.ಜಿತೇಂದ್ರ ನಾಥ್ ಪಾಂಡೆ ಕೊರೋನಾಗೆ ಬಲಿಯಾದ ಹಿರಿಯ ವೈದ್ಯರಾಗಿದ್ದಾರೆ.
ವೈದ್ಯರ ಆರೋಗ್ಯವನ್ನು ಪ್ರತೀನಿತ್ಯ ತಪಾಸಣೆ ಮಾಡಲಾಗುತ್ತಿತ್ತು. ಆರೋಗ್ಯ ಸುಧಾರಿಸುತ್ತಿತ್ತು. ಆದರೆ, ನಿನ್ನೆ ರಾತ್ರಿ ಊಟ ಮಾಡಿದ ಬಳಿಕ ಮಲಗಿದ್ದ ಅವರು, ಕೊನೆಯುಸಿರೆಳೆದಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಾಂಡೆಯವರ ನಿಧನ ಅತ್ಯಂತ ದುಃಖ ತರಿಸಿದೆ ಎಂದು ಹಿರಿಯ ವೈದ್ಯ ಡಾ.ಸಂಗೀತಾ ರೆಡ್ಡಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ