
ನವದೆಹಲಿ: ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1.4 ಲಕ್ಷ ದಾಟಿದ್ದು ಇರಾನ್ ನ್ನು ಹಿಂದಿಕ್ಕಿ ಭಾರತ ಅತಿ ಹೆಚ್ಚು ಸೋಂಕಿತರಿರುವ ಪ್ರದೇಶಗಳ ಪಕಿ 10 ನೇ ಸ್ಥಾನದಲ್ಲಿದೆ.
ಕೊರೋನಾ ವೈರಸ್ ಗೆ ಲಸಿಕೆ ಕಂಡುಹಿಡಿಯುವ ಕೆಲಸ ನಿರಂತರವಾಗಿ ನಡೆಯುತ್ತಿದೆಯಾದರೂ ಈವರೆಗೂ ಸ್ಪಷ್ಟ ಫಲಿತಾಂಶ ಯಾರಿಗೂ ಸಿಕ್ಕಿಲ್ಲ. ಈ ನಡುವೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಯ ಮುಖ್ಯಸ್ಥ, ಪ್ರಾದೇಶಿಕ ವೈದ್ಯಕೀಯ ಸಂಶೋಧನೆಯ ನಿರ್ದೇಶಕ, ಡಾ.ರಜನಿ ಕಾಂತ್ ಮಾತನಾಡಿದ್ದು, ಕೋವಿಡ್-19 ಲಸಿಕೆಯನ್ನು ಮಾನವರ ಮೇಲೆ ಪ್ರಯೋಗಿಸುವುದು ಕನಿಷ್ಟ 6 ತಿಂಗಳಾಗುತ್ತದೆ ಎಂದು ಹೇಳಿದ್ದಾರೆ.
ಲಸಿಕೆಯನ್ನು ತಯಾರಿಸಲು ವೈರಸ್ ಪ್ರಭೇದಗಳನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳಿಸಲಾಗಿದ್ದು ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ ಗೆ ಯಶಸ್ವಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಪ್ರಯತ್ನಗಳ ಫಲವಾಗಿ ತಯಾರಾಗುವ ಲಸಿಕೆಯನ್ನು ಮನುಷ್ಯರ ಮೇಲೆ ಪ್ರಯೋಗಿಸಲು ಕನಿಷ್ಟ 6 ತಿಂಗಳು ಬೇಕಾಗುತ್ತದೆ ಎಂದು ರಜನಿಕಾಂತ್ ಹೇಳಿದ್ದಾರೆ.
ಕಳೆದ ವಾರದಿಂದ ಹೆಚ್ಚಾಗುತ್ತಿರುವ ಕೊರೋನಾ ಪ್ರಕರಣಗಳನ್ನು ಕಂಡು ಭಯಪಡಬೇಕಿಲ್ಲ. ವೃದ್ಧರು ಹಾಗೂ ಅನಾರೋಗ್ಯ ಪೀಡಿತರ ಬಗ್ಗೆ ಹೆಚ್ಚು ಗಮನ ಹರಿಸಬೇಕಿದ್ದು, ಮರಣ ಪ್ರಮಾಣವನ್ನು ಸಾಧ್ಯವಾದಷ್ಟೂ ಕಡಿಮೆ ಮಾಡುವತ್ತ ಗಮನ ಹರಿಸಬೇಕಿದೆ ಎಂದು ರಜನಿಕಾಂತ್ ತಿಳಿಸಿದ್ದಾರೆ.
Advertisement