ಲಾಕ್‌ಡೌನ್‌ ನಿಂದಾಗಿ ಕೆಲಸ ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆ

ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡ ವ್ಯಕ್ತಿಯೊಬ್ಬ ತೀವ್ರ ಖಿನ್ನತೆಗೊಳಗಾಗಿ ಆತ್ಮಹತ್ಯೆಕ್ಕೆ ಶರಣಾಗಿರುವ ಘಟನೆ ಈ ಜಿಲ್ಲೆಯ ತೆನುಘಾಟ್ ವ್ಯಾಪ್ತಿಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೊಕಾರೊ: ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡ ವ್ಯಕ್ತಿಯೊಬ್ಬ ತೀವ್ರ ಖಿನ್ನತೆಗೊಳಗಾಗಿ ಆತ್ಮಹತ್ಯೆಕ್ಕೆ ಶರಣಾಗಿರುವ ಘಟನೆ ಈ ಜಿಲ್ಲೆಯ ತೆನುಘಾಟ್ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಸಂಜಯ್ ಪಾಠಕ್ (28) ಮಾರ್ಚ್ 20 ರಂದು ತನ್ನ ಅಣ್ಣನ ಮನೆಗೆ ಬಂದಿದ್ದ. ಆದರೆ ಲಾಕ್‌ಡೌನ್ ಘೋಷಿಸಿದ ಕಾರಣ ಆತ ತಾನು ಕೆಲಸ ಮಾಡುತ್ತಿದ್ದ ಗಿರಿಧ್ ಗೆ ಹಿಂತಿರುಗಲು ಸಾಧ್ಯವಾಗಿರಲಿಲ್ಲ. ಗಿರಿಧ್‍ನಲ್ಲಿ ಆತ ಸ್ಥಾವರವೊಂದರಲ್ಲಿ ಕೆಲಸ ಮಾಡುತ್ತಿದ್ದ.

ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡಿದ್ದ ಸಂಜಯ್, ತನ್ನ ಕುಟುಂಬ ಮತ್ತು ಮಕ್ಕಳ ಭವಿಷ್ಯದ ಬಗ್ಗೆ ಆತಂಕಗೊಂಡಿದ್ದ ಎಂದು ಆತನ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com