ಮರಾಠಿ ಮಾತನಾಡುವ ಕರ್ನಾಟಕದ ಪ್ರದೇಶಗಳು ಶೀಘ್ರ ಮಹಾರಾಷ್ಟ್ರಕ್ಕೆ ಸೇರ್ಪಡೆ: ಸಚಿವ ಪಾಟೀಲ್

ಮರಾಠಿ ಮಾತನಾಡುವ ಕರ್ನಾಟಕ ಗಡಿ ಪ್ರದೇಶಗಳು ಶೀಘ್ರದಲ್ಲೇ ಮಹಾರಾಷ್ಟ್ರಕ್ಕೆ ಸೇರಲಿವೆ ಎಂದು ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಹೇಳಿದ್ದಾರೆ.
ಜಯಂತ್ ಪಾಟೀಲ್
ಜಯಂತ್ ಪಾಟೀಲ್
Updated on

ಔರಂಗಾಬಾದ್: ಮರಾಠಿ ಮಾತನಾಡುವ ಕರ್ನಾಟಕ ಗಡಿ ಪ್ರದೇಶಗಳು ಶೀಘ್ರದಲ್ಲೇ ಮಹಾರಾಷ್ಟ್ರಕ್ಕೆ ಸೇರಲಿವೆ ಎಂದು ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಹೇಳಿದ್ದಾರೆ.

ಭಾಷಾ ಸೂಕ್ಷ್ಮ ವಿಚಾರದ ಸಂಬಂಧ ಮಾತನಾಡಿದ ಮಹಾರಾಷ್ಟ್ರ  ಎನ್‌ಸಿಪಿ ಅಧ್ಯಕ್ಷ ಪಾಟೀಲ್, "ಮರಾಠಿ ಸಹೋದರರನ್ನು ಬೆಂಬಲಿಸಿ ಎನ್‌ಸಿಪಿ ಇಂದು ಕರಾಳ ದಿನ ಆಚರಿಸುತ್ತಿದೆ. ಈ ವೇಳೆ ಪ್ರತಿಭಟನೆಯ ಕುರುಹಾಗಿ  ಕಪ್ಪು ರಿಬ್ಬನ್‌ ಕಟ್ಟಿಕೊಳ್ಲಲಾಗಿದೆ" ಎಂದು ಹೇಳಿದರು.

"ಕರ್ನಾಟಕದ ಮರಾಠಿ ಗಡಿ ನಿವಾಸಿಗಳ ವಿರುದ್ಧದ ಅನ್ಯಾಯ, ದೌರ್ಜನ್ಯ ಮತ್ತು ದಬ್ಬಾಳಿಕೆ ಸಹಿಸಲಾಗದು ಈ ಸಂಬಂಧ  ರಾಜ್ಯದ ಎನ್‌ಸಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಗಡಿ ಪ್ರದೇಶಗಳಲ್ಲಿ ಸಮಸ್ಯೆಯಲ್ಲಿರುವ ಜನರ ಬೆಂಬಲಕ್ಕೆ ಇಡೀ ಮಹಾರಾಷ್ಟ್ರ ಜನರಿದ್ದಾರೆ" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com