'ಒಂದು ಶ್ರೇಣಿ, ಒಂದು ಪಿಂಚಣಿ' ಐತಿಹಾಸಿಕ ಯೋಜನೆ ಜಾರಿಗೆ ಬಂದ ಮಹತ್ವದ ದಿನ ಇಂದು: ಪ್ರಧಾನಿ ಮೋದಿ 

ಸೇನಾಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧರ ಕ್ಷೇಮಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ ಒಂದು ಶ್ರೇಣಿ, ಒಂದು ಪಿಂಚಣಿ(ಒಆರ್ ಒಪಿ) ಯೋಜನೆ ಒಂದು ಐತಿಹಾಸಿಕ ಹೆಜ್ಜೆಯಾಗಿದ್ದು ಅದರ ಐದನೇ ವರ್ಷಾಚರಣೆಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ಸೇನಾಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧರ ಕ್ಷೇಮಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ ಒಂದು ಶ್ರೇಣಿ, ಒಂದು ಪಿಂಚಣಿ(ಒಆರ್ ಒಪಿ) ಯೋಜನೆ ಒಂದು ಐತಿಹಾಸಿಕ ಹೆಜ್ಜೆಯಾಗಿದ್ದು ಅದರ ಐದನೇ ವರ್ಷಾಚರಣೆಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಯೋಧರು ನಿವೃತ್ತಿ ಹೊಂದಿದ ನಂತರ ಎಲ್ಲರಿಗೂ ಸಮಾನ ಪಿಂಚಣಿ ನೀಡುವ ಯೋದನೆ ಇದಾಗಿದ್ದು ನಮ್ಮ ದೇಶವನ್ನು ರಕ್ಷಿಸುವ ಯೋಧರ ಜೀವನ ಕ್ಷೇಮಕ್ಕಾಗಿ ಜಾರಿಗೆ ತಂದಿರುವ ಈ ಯೋಜನೆ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವಾಗಿದೆ, 5 ವರ್ಷಗಳು ಕಳೆದಿರುವ ಈ ಸಂದರ್ಭ ಅಭೂತಪೂರ್ವ ಕ್ಷಣ. ದಶಕಗಳಿಂದ ಭಾರತ ದೇಶದ ಯೋಧರು ಈ ಯೋಜನೆಗಾಗಿ ಕಾಯುತ್ತಿದ್ದರು. ನಮ್ಮ ಯೋಧರು ಮತ್ತು ಸೇವೆಯಿಂದ ನಿವೃತ್ತಿ ಹೊಂದಿದವರ ಅಭೂತಪೂರ್ವ ಸೇವೆಗೆ ನನ್ನ ಅಭಿನಂದನೆಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಅವರು ರಕ್ಷಣಾ ಸಚಿವಾಲಯ ತೆಗೆದುಕೊಂಡಿರುವ ಪ್ರಮುಖ ನಿರ್ಧಾರಗಳನ್ನು ಹಂಚಿಕೊಂಡಿದ್ದಾರೆ. ಸೇನೆಯಿಂದ ನಿವೃತ್ತಿ ಹೊಂದಿದ 20.60 ಲಕ್ಷ ನಿವೃತ್ತ ಯೋಧರಿಗೆ ಮತ್ತು ಅವರ ಕುಟುಂಬಸ್ಥರಿಗೆ ಸರ್ಕಾರ 10 ಸಾವಿರದ 795.4 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ವಾರ್ಷಿಕ ಮರುಕಳಿಸುವ ವೆಚ್ಚ 7 ಸಾವಿರದ 123.38 ಕೋಟಿ ರೂಪಾಯಿಯಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com