ಚೆನ್ನೈ: ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಐಐಎಸ್ ಅಧಿಕಾರಿ ಎಸ್ ಶಶಿಕಾಂತ್ ಸೆಂಥಿಲ್ 

ಕಳೆದ ವರ್ಷ ನಾಗರಿಕ ಸೇವೆಗೆ ರಾಜೀನಾಮೆ ನೀಡಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್. ಶಶಿಕಾಂತ್ ಸೆಂಥಿಲ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.
ಶಶಿಕಾಂತ್ ಸೆಂಥಿಲ್
ಶಶಿಕಾಂತ್ ಸೆಂಥಿಲ್
Updated on

ಚೆನ್ನೈ: ಕಳೆದ ವರ್ಷ ನಾಗರಿಕ ಸೇವೆಗೆ ರಾಜೀನಾಮೆ ನೀಡಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್. ಶಶಿಕಾಂತ್ ಸೆಂಥಿಲ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ಚೆನ್ನೈನಲ್ಲಿನ ತಮಿಳುನಾಡು ಕಾಂಗ್ರೆಸ್  ಸಮಿತಿಯ ಪ್ರಧಾನ ಕಚೇರಿಯಲ್ಲಿಂದು ನಡೆದ ಸಮಾರಂಭದಲ್ಲಿ ತಮಿಳುನಾಡು ಉಸ್ತುವಾರಿ ದಿನೇಶ್ ಗುಂಡೂರಾವ್, ತಮಿಳುನಾಡು ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಎಸ್. ಅಳಗಿರಿ, ಎಐಸಿಸಿ ಕಾರ್ಯದರ್ಶಿಗಳಾದ ಸಂಜಯ್ ದತ್ ಮತ್ತು ಸಿರಿವೆಲ್ಲಾ ಪ್ರಸಾದ್ ಅವರ ಸಮ್ಮುಖದಲ್ಲಿ ಸೆಂಥಿಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

41 ವರ್ಷದ ಮಾಜಿ ಅಧಿಕಾರಿಯಾಗಿರುವ ಕರ್ನಾಟಕ ಕೇಡರ್ ನ ಸೆಂಥಿಲ್ 2009ರಲ್ಲಿ ನಾಗರಿಕ ಸೇವೆಗೆ ಸೇರ್ಪಡೆಯಾಗಿದ್ದರು. 2019ರ ಸೆ.6 ರಂದು ರಾಜೀನಾಮೆ ಸಲ್ಲಿಸಿದ ನಂತರ ಸೆಂಥಿಲ್ ಸಿಎಎ, ಎನ್ ಆರ್ ಸಿ ವಿರುದ್ಧ ಪ್ರತಿಭಟನೆಯಲ್ಲಿ ಸಕ್ರಿಯವಾಗಿದ್ದರು.

ಸಂವಿಧಾನದ  ಸಿದ್ಧಾಂತಗಳಿಗೆ ಸದಾ ಸ್ಥಿರವಾಗಿರುವ ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿರುವುದಾಗಿ ಸೆಂಥಿಲ್ ಭಾನುವಾರ ಹೇಳಿಕೆ ನೀಡಿದ್ದರು. 2021ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು, ಸೆಂಥಿಲ್ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com