ಪಶ್ಚಿಮ ಬಂಗಾಳ: ಅಪರಿಚಿತ ದುಷ್ಕರ್ಮಿಗಳಿಂದ ಟಿಎಂಸಿ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ, ಹತ್ಯೆ 

ಪಶ್ಚಿಮ ಬಂಗಾಳದ ಪಾಸ್ಚಿಮ್ ಬರ್ಧಮನ್ ಜಿಲ್ಲೆಯ ಅಂಡಾಲ್ ನಲ್ಲಿ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಟಿಎಂಸಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪಾಸ್ಚಿಮ್ ಬರ್ಧಮನ್ ಜಿಲ್ಲೆಯ ಅಂಡಾಲ್ ನಲ್ಲಿ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಟಿಎಂಸಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಬುಧವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ಇಬ್ಬರು ಅಪರಿಚಿತರು ಗುಂಡಿನ ಸುರಿಮಳೆ ಸುರಿಸಿದ್ದರಿಂದ ಧರ್ಮವೀರ್ ನುನಿಯಾ ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ದಾಳಿಯಲ್ಲಿ ನುನಿಯಾ ಜೊತೆಗಿದ್ದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಹಿಂದೆ ರಾಜಕೀಯ ಕೈವಾಡವಿದೆ ಎಂಬುದನ್ನು ಸ್ಥಳೀಯ ಟಿಎಂಸಿ ನಾಯಕರು ನಿರಾಕರಿಸಿದ್ದು, ದುಷ್ಕರ್ಮಿಗಳಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ. 

ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿನ ಬಣಗಳ ನಡುವಣ ಭಿನ್ನಾಭಿಪ್ರಾಯದಿಂದಾಗಿ ಈ ಹತ್ಯೆ ನಡೆದಿದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com