ಕೋವಿಡ್-19 ಎಫೆಕ್ಟ್: ತೆಲಂಗಾಣದಲ್ಲಿ 2 ಗಂಟೆ ಮಾತ್ರ ಹಸಿರು ಪಟಾಕಿ ಹೊಡೆಯಲು 'ಸುಪ್ರೀಂ' ಅವಕಾಶ!

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತೆಲಂಗಾಣದಲ್ಲಿ 2 ಗಂಟೆ ಮಾತ್ರ ಹಸಿರು ಪಟಾಕಿ ಹೊಡೆಯಲು 'ಸುಪ್ರೀಂ ಕೋರ್ಟ್' ಅವಕಾಶ ನೀಡಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತೆಲಂಗಾಣದಲ್ಲಿ 2 ಗಂಟೆ ಮಾತ್ರ ಹಸಿರು ಪಟಾಕಿ ಹೊಡೆಯಲು 'ಸುಪ್ರೀಂ ಕೋರ್ಟ್' ಅವಕಾಶ ನೀಡಿದೆ.

ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಹಿಂದೆ ಎಲ್ಲ ರೀತಿಯ ಪಟಾಕಿ ಮಾರಾಟ ಮತ್ತು ಬಳಕೆ ಮೇಲೆ ತೆಲಂಗಾಣ ಸರ್ಕಾರ ನಿಷೇಧ ಹೇರಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ತೆಲಂಗಾಣ ಪಟಾಕಿ ಮಾರಾಟಗಾರರ ಸಂಘ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ದಾಖಲಿಸಿತ್ತು. ಈ ಅರ್ಜಿಯ  ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರಾದ ಎಎಂ ಖಾನ್ವಿಲ್ಕರ್ ಮತ್ತು ಸಜೀವ್ ಖನ್ನಾ ನೇತೃತ್ವ ದ್ವಿಸದಸ್ಯ ಪೀಠ 2 ಗಂಟೆ ಮಾತ್ರ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಅವಕಾಶ ನೀಡಿದೆ.

ಅಂತೆಯೇ ನವೆಂಬರ್ 9 ರಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವಿಧಿಸಿರುವ ನಿರ್ಬಂಧಗಳನ್ನು ತೆಲಂಗಾಣ ರಾಜ್ಯ ಸರ್ಕಾರ ಗಮನಿಸಬೇಕು ಎಂದೂ ಸುಪ್ರೀಂ ಕೋರ್ಟ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com