ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಹಿಂದೂಸ್ತಾನ್ ಆವಂ ಮೋರ್ಚಾ ಸಂಸ್ಥಾಪಕ ಜಿತನ್ ರಾಮ್ ಮಾಂಜಿ ಹೊಸ ಸರ್ಕಾರದ ಭಾಗವಾಗುವುದಿಲ್ಲ ಎಂದು ಹೇಳಿದ್ದಾರೆ.
ಹೊಸದಾಗಿ ಆಯ್ಕೆಯಾದ ನಾಲ್ವರು ಶಾಸಕರು ಮಾಂಜಿ ಅವರ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ತೋರಿದ ಮಾಂಜಿ ಅವರ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳಲಾಯಿತು.
ತಾವು ಈ ಹಿಂದೆ ಸಿಎಂ ಆಗಿದ್ದವರು ಹೀಗಾಗಿ ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಸಂಪುಟದಲ್ಲಿ ಸಚಿವರಾಗುವುದಿಲ್ಲ ಎಂದು ತಿಳಿಸಿದ್ದಾರೆ, ನೂತನ ಶಾಸಕರಿಗೆ ಪಕ್ಷದ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.
Advertisement