ಟಿಎಂಸಿ ಕಾರ್ಯಕರ್ತನಿಗೆ ಚೂರಿ ಇರಿತ, ಕಚ್ಚಾ ಬಾಂಬ್‌ ತೂರಾಟ: ಬಿಜೆಪಿ ವಿರುದ್ಧ ಆರೋಪ

ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ತೃಣ ಮೂಲ ಕಾಂಗ್ರೆಸ್ ನ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. 
ಟಿಎಂಸಿ ಕಾರ್ಯಕರ್ತನಿಗೆ ಚೂರಿ ಇರಿತ, ಕಚ್ಚಾ ಬಾಂಬ್‌ ತೂರಾಟ: ಬಿಜೆಪಿ ವಿರುದ್ಧ ಆರೋಪ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ತೃಣ ಮೂಲ ಕಾಂಗ್ರೆಸ್ ನ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. 

ಆಕಾಶ್ ಪ್ರಸಾದ್ (22) ಹತ್ಯೆಯಾಗಿರುವ ಕಾರ್ಯಕರ್ತನಾಗಿದ್ದು, ಹಲವುಬಾರಿ ಚೂರಿ ಇರಿತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ ಅಷ್ಟೇ ಅಲ್ಲದೇ ಆತನ ಮೇಲೆ ಕಚ್ಚಾ ಬಾಂಬ್‌ ಎಸೆದು ದಾಳಿ ನಡೆಸಲಾಗಿದೆ. 
 
ಪಾಲ್ಘಾಟ್ ರಸ್ತೆಯಲ್ಲಿ ಜಗದ್ದಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಆತ ಮೃತಪಟ್ಟಿದ್ದ ಎಂದು ವೈದ್ಯರು ಘೋಷಿಸಿದ್ದಾರೆ. 

ಪಕ್ಷದ ಕಾರ್ಯಕರ್ತರಲ್ಲಿ ಭಯ ಮೂಡಿಸುವುದಕ್ಕಾಗಿ ಈ ಹತ್ಯೆ ಮಾಡಲಾಗಿದ್ದು ಬಿಜೆಪಿ ಇದಕ್ಕೆ ಹೊಣೆ ಎಂಬ ಆರೋಪವನ್ನೂ ಟಿಎಂಸಿ ಮಾಡಿದೆ. ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ಟಿಎಂಸಿ ಆರೋಪ ಮಾಡಿದ್ದು, ಇದು ಬಿಜೆಪಿಯ ಷಡ್ಯಂತ್ರ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com