ಖುಷ್ಬೂ ನಂತರ ಕಾಂಗ್ರೆಸ್ ತೊರೆದ ಅಪ್ಸರಾ ರೆಡ್ಡಿ, ಮತ್ತೆ ಎಐಎಡಿಎಂಕೆ ಸೇರಲಿದ್ದಾರೆ ತೃತೀಯಲಿಂಗಿ

ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕೆಲವೇ ವಾರಗಳಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಮೊದಲ ತೃತೀಯಲಿಂಗಿ ಅಪ್ಸರಾ ರೆಡ್ಡಿ ಅವರು ಸಹ ಕಾಂಗ್ರೆಸ್ ತೊರೆದಿದ್ದು, ಮತ್ತೆ ಎಐಎಡಿಎಂಕೆ ಸೇರಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಜತೆ ಅಪ್ಸರಾ
ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಜತೆ ಅಪ್ಸರಾ
Updated on

ಚೆನ್ನೈ: ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕೆಲವೇ ವಾರಗಳಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಮೊದಲ ತೃತೀಯಲಿಂಗಿ ಅಪ್ಸರಾ ರೆಡ್ಡಿ ಅವರು ಸಹ ಕಾಂಗ್ರೆಸ್ ತೊರೆದಿದ್ದು, ಮತ್ತೆ ಎಐಎಡಿಎಂಕೆ ಸೇರಲು ನಿರ್ಧರಿಸಿದ್ದಾರೆ.

ಅಪ್ಸರಾ ರೆಡ್ಡಿ ಅವರು ಮೂರು ವರ್ಷಗಳ ನಂತರ ಮತ್ತೆ ಎಐಎಡಿಎಂಕೆಗೆ ಬರುತ್ತಿದ್ದು, ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಓ ಪನ್ನೀರ್ ಸೇಲ್ವಂ ಅವರ ನೇತೃತ್ವದಲ್ಲಿ ಪಕ್ಷ ಸೇರಲಿದ್ದಾರೆ.

ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜತೆ ಮಾತನಾಡಿದ ರೆಡ್ಡಿ, ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಅಮ್ಮನ ನಿಯಮವನ್ನು ಪಾಲಿಸುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ಎಐಎಡಿಎಂಕೆಯಲ್ಲಿ ತೃತೀಯಲಿಂಗಿ ಮಹಿಳೆಗೆ ಸರಿಯಾದ ಮಾನ್ಯತೆ ಸಿಗುತ್ತದೆ ಎಂದು ನಾನು ಬಲವಾಗಿ ನಂಬುತ್ತೇನೆ. ಏಕೆಂದರೆ ನಾನು ಅದನ್ನು ಅಮ್ಮನ ಕಾಲದಲ್ಲಿ ಅನುಭವಿಸಿದ್ದೇನೆ ಎಂದು ಹೇಳಿದ್ದಾರೆ. 

ಎಐಎಡಿಎಂಕೆ ಯಲ್ಲಿ ಯಾವುದೇ ಸ್ಥಾನವನ್ನು ನಿರೀಕ್ಷಿಸುತ್ತಿಲ್ಲ. ಆದರೆ ಅವರು ನೀಡುವ ಯಾವುದೇ ಹುದ್ದೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ರೆಡ್ಡಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com