ಭಾರತ-ಚೀನಾ ಸೇನೆ ನಿಯೋಜನೆ: ಅ.12ಕ್ಕೆ 7ನೇ ಸುತ್ತಿನ ಕಮಾಂಡರ್ ಮಟ್ಟದ ಮಾತುಕತೆ

ಪೂರ್ವ ಲಡಾಕ್ ಗಡಿಯಲ್ಲಿ ಮುಂದುವರಿದಿರುವ ಸೇನೆ ನಿಲುಗಡೆ, ಉದ್ವಿಗ್ನ ವಾತಾವರಣವನ್ನು ತಗ್ಗಿಸಲು 7ನೇ ಸುತ್ತಿನ ಭಾರತ-ಚೀನಾ ದೇಶಗಳ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ಇದೇ 12ರಂದು ಏರ್ಪಡಲಿದೆ.
ಶ್ರೀನಗರ-ಲಡಾಕ್ ಹೆದ್ದಾರಿಯಲ್ಲಿ ಭಾರತೀಯ ಯೋಧರು ವಾಹನಗಳಲ್ಲಿ ಸಾಗುತ್ತಿರುವುದು
ಶ್ರೀನಗರ-ಲಡಾಕ್ ಹೆದ್ದಾರಿಯಲ್ಲಿ ಭಾರತೀಯ ಯೋಧರು ವಾಹನಗಳಲ್ಲಿ ಸಾಗುತ್ತಿರುವುದು
Updated on

ನವದೆಹಲಿ: ಪೂರ್ವ ಲಡಾಕ್ ಗಡಿಯಲ್ಲಿ ಮುಂದುವರಿದಿರುವ ಸೇನೆ ನಿಲುಗಡೆ, ಉದ್ವಿಗ್ನ ವಾತಾವರಣವನ್ನು ತಗ್ಗಿಸಲು 7ನೇ ಸುತ್ತಿನ ಭಾರತ-ಚೀನಾ ದೇಶಗಳ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ಇದೇ 12ರಂದು ಏರ್ಪಡಲಿದೆ.

ಎರಡೂ ದೇಶಗಳ ಮಧ್ಯೆ ಮುಂದುವರಿದಿರುವ ಸೇನೆ ನಿಲುಗಡೆ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಪೂರ್ವ ಲಡಾಕ್ ವಲಯದಲ್ಲಿ ಕಮಾಂಡರ್ ಮಟ್ಟದ ಮಾತುಕತೆ ಅಕ್ಟೋಬರ್ 12ರಂದು ನಡೆಯಲಿದೆ. ಇದುವರೆಗೆ ಎರಡೂ ದೇಶಗಳು ಮಧ್ಯೆ 6 ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ನಡೆದಿದೆ ಎಂದು ಭಾರತೀಯ ಸೇನೆಯ ಮೂಲಗಳು ತಿಳಿಸಿವೆ.

ಗಾಲ್ವಾನ್ ಕಣಿವೆ ತನಗೆ ಸೇರಿದ್ದು ಎಂಬುದು ಚೀನಾದ ಪ್ರತಿಪಾದನೆಯಾಗಿದೆ. ಆದರೆ ಭಾರತ ಅದನ್ನು ತಿರಸ್ಕರಿಸಿದೆ. ಗಾಲ್ವಾನ್ ಕಣಿವೆಯ ಮೇಲಿನ ಹಕ್ಕು ಈ ಹಿಂದೆ ತನ್ನದೇ ಆದ ಸ್ಥಾನಕ್ಕೆ ಅನುಗುಣವಾಗಿರಲಿಲ್ಲ ಎಂದು ಭಾರತ ಹೇಳುತ್ತದೆ, ಚೀನಾದ ಕಡೆಯಿಂದ ಉಲ್ಲಂಘನೆಯ ಪ್ರಯತ್ನಗಳು ಸತತವಾಗಿ ನಡೆಯುತ್ತಿದೆ ಅದಕ್ಕೆ ಇದುವರೆಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಾ ಬಂದಿದೆ.

16 ಬಿಹಾರ್ ನ ಕಮಾಂಡಿಂಗ್ ಆಫೀಸರ್ ಕರ್ನಲ್ ಬಿ ಸಂತೋಷ್ ಬಾಬು ಸೇರಿ 20 ಮಂದಿ ಭಾರತೀಯ ಯೋಧರು ಕಳೆದ ಜೂನ್ 15ರಂದು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯೊಂದಿಗೆ ಗಾಲ್ವಾನ್ ಕಣಿವೆಯ ಗಸ್ತು ಕೇಂದ್ರ 14ರಲ್ಲಿ ಸತತ 7 ಗಂಟೆಗಳ ಕಾಲ ನಡೆದ ಘರ್ಷಣೆಯಲ್ಲಿ ಹುತಾತ್ಮರಾಗಿದ್ದರು.

ಗಡಿ ವಾಸ್ತವ ರೇಖೆ(ಎಲ್‌ಎಸಿ)ಯ ಬಳಿ ಸೇನೆ ನಿಲುಗಡೆಗೆ ಸಂಬಂಧಿಸಿದಂತೆ 5ನೇ ಸುತ್ತಿನ ರಾಜತಾಂತ್ರಿಕ ಮಾತುಕತೆಯಲ್ಲಿ ಸೇನೆಯನ್ನು ಹಿಂತೆಗೆದುಕೊಳ್ಳುವ ಬಗ್ಗೆ ಒಮ್ಮತವನ್ನು ಜಾರಿಗೆ ತರುವ ಅಗತ್ಯವನ್ನು ಉಭಯ ರಾಷ್ಟ್ರಗಳು ಒಪ್ಪಿಕೊಂಡಿದ್ದರೂ, ಯಾವುದೇ ಮಹತ್ವದ ಪ್ರಗತಿ ಸಾಧಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com