ಬಿಜೆಪಿ ಸೇರಿದ ಅರ್ಜುನ ಪ್ರಶಸ್ತಿ ಪುರಸ್ಕೃತೆ, ಶೂಟರ್ ಶ್ರೇಯಸಿ ಸಿಂಗ್!

ಅರ್ಜುನ ಪ್ರಶಸ್ತಿ ಪುರಸ್ಕೃತೆ, ಭಾರತದ ಶೂಟರ್ ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 
ಶ್ರೇಯಸಿ ಸಿಂಗ್
ಶ್ರೇಯಸಿ ಸಿಂಗ್
Updated on

ಪಾಟ್ನಾ: ಅರ್ಜುನ ಪ್ರಶಸ್ತಿ ಪುರಸ್ಕೃತೆ, ಭಾರತದ ಶೂಟರ್ ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 

ಆರ್‌ಜೆಡಿಗೆ ಸೇರ್ಪಡೆಗೊಳ್ಳುವ ಊಹಾಪೋಹಗಳಿಗೆ ಅಂತ್ಯ ಹಾಡಿರುವ ಬಿಹಾರ ಮೂಲದ ಅಂತಾರಾಷ್ಟ್ರೀಯ ಖ್ಯಾತಿಯ ಶೂಟರ್ ಮತ್ತು ಅರ್ಜುನ ಖೇಲ್ ಪ್ರಶಸ್ತಿ ಪುರಸ್ಕೃತ ಶ್ರೇಯಾಸಿ ಸಿಂಗ್ ಅವರು ದೇಶವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪದೊಂದಿಗೆ ಬಿಜೆಪಿಗೆ ಸೇರಿಕೊಂಡಿದ್ದಾರೆ. 

ದಿವಂಗತ ಮಾಜಿ ಕೇಂದ್ರ ಸಚಿವ ದಿಗ್ವಿಜಯ್ ಸಿಂಗ್ ಮತ್ತು ಮಾಜಿ ಬಂಕಾ ಸಂಸದ ಪುತುಲ್ ಸಿಂಗ್ ಅವರ ಪುತ್ರಿ. ಅವರು ಅನೇಕ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕಾಗಿ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಂಸೆ ಮತ್ತು ಪದಕಗಳನ್ನು ಗೆದ್ದಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಸಂಜಯ್ ಜೈಸ್ವಾಲ್ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಶ್ರೇಯಸಿ ಸಿಂಗ್ ಪಕ್ಷಕ್ಕೆ ಸೇರಿದರು. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಶೂಟಿಂಗ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ ಮತ್ತು 2014 ರಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com