ಶ್ರೀನಗರ: ಇಲ್ಲಿನ ನೌಗಾಮ್ ಪ್ರದೇಶದಲ್ಲಿ ಉಗ್ರರು ಇಂದು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದರಿಂದ ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೌಗಾಮ್ ಪ್ರದೇಶದ ಕಂಡಿಜಾಲ್ ಸೇತುವೆ ಬಳಿ ಇಂದು ಮಧ್ಯಾಹ್ನ ಉಗ್ರರು ಗುಂಡಿನ ದಾಳಿ ನಡೆಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಗುಂಡಿನ ದಾಳಿಯಿಂದಾಗಿ ಇಬ್ಬರು ಸಿಆರ್ ಪಿಎಫ್ ಯೋಧರು ಗಾಯಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಗಾಯಾಳುಗಳನ್ನು ಇಲ್ಲಿನ ಸೇನೆಯ 92 ಬೇಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮುಂದಿನ ಮಾಹಿತಿ ತಿಳಿದುಬರಬೇಕಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
Advertisement