ಸಿಆರ್ ಪಿಎಫ್ ಮೇಲೆ ಸೋಮವಾರ ನಡೆದ ದಾಳಿ ಹಿಂದೆ ಎಲ್ಇಟಿ ಕೈವಾಡ

ಅ.05 ರಂದು ಸಿಆರ್ ಪಿಎಫ್ ರಸ್ತೆ ಉದ್ಘಾಟನಾ ಕಾರ್ಯಕ್ರಮದ ಮೇಲೆ ನಡೆದ ಮಾರಣಾಂತಿಕ ದಾಳಿಯ ಹಿಂದೆ ಪಾಕ್ ಮೂಲದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಅ.05 ರಂದು ಸಿಆರ್ ಪಿಎಫ್ ರಸ್ತೆ ಉದ್ಘಾಟನಾ ಕಾರ್ಯಕ್ರಮದ ಮೇಲೆ ನಡೆದ ಮಾರಣಾಂತಿಕ ದಾಳಿಯ ಹಿಂದೆ ಪಾಕ್ ಮೂಲದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ.

ನೌಗಾಮ್ ಪ್ರದೇಶದಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಳಿ ಉಗ್ರರು ಸಿಆರ್ ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ್ದರು ಈ ಘಟನೆಯಲ್ಲಿ ಇಬ್ಬರು ಸಿಬ್ಬಂದಿಗಳು ಹುತಾತ್ಮರಾಗಿದ್ದರು ಮೂವರು ತೀವ್ರವಾಗಿ ಗಾಯಗೊಂಡಿದ್ದರು

ನಾವು ಈ ದಾಳಿಯ ಹಿಂದೆ ಇರುವ ಉಗ್ರರನ್ನು ಗುರುತಿಸಿದ್ದೇವೆ. ಅವರು ಲಷ್ಕರ್ ಸಂಘಟನೆಗೆ ಸೇರಿದವರಾಗಿದ್ದು ಸೈಫುಲ್ಲಾ ಎಂಬ ಪಾಕಿ ಭಯೋತ್ಪಾದಕನ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಅವರನ್ನು ಶೀಘ್ರವೇ ಹೆಡೆಮುರಿಕಟ್ಟಲಾಗುವುದು ಎಂದು ಕಾಶ್ಮೀರ ಝೋನ್ ನ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ. 

ಇಬ್ಬರು ಉಗ್ರರು ದ್ವಿಚಕ್ರವಾಹನದಲ್ಲಿ ಬಂದು ಎ.ಕೆ ರೈಫಲ್ ನಿಂದ ಗುಂಡು ಹಾರಿಸಿದ್ದರು. ಇದೇ ಮಾದರಿಯಲ್ಲಿ ಲಷ್ಕರ್ ಉಗ್ರಸಂಘಟನೆ ಬದ್ಗೌಮ್ ನ ಚಡೂರಾ ಪ್ರದೇಶದಲ್ಲಿ ದಾಳಿ ನಡೆಸಿ ಸಿಆರ್ ಪಿಎಫ್ ನ ಸಬ್ ಇನ್ಸ್ಪೆಕ್ಟರ್ ನ್ನು ಹತ್ಯೆ ಮಾಡಿತ್ತು ಎಂದೂ ಐಜಿಪಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com