ಸಕಲ ಸರ್ಕಾರಿ ಗೌರವದೊಂದಿಗೆ ರಾಮ್ ವಿಲಾಸ್ ಪಾಸ್ವಾನ್ ಅಂತ್ಯಸಂಸ್ಕಾರ

ರಾಜ್ಯ ಸರ್ಕಾರದ ಗೌರವಾದರಗಳೊಂದಿಗೆ ಎಲ್ ಜೆಪಿ ಸ್ಥಾಪಕ ಮತ್ತು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪಾರ್ಥಿವ ಶರೀರ ಶನಿವಾರ ಅಗ್ನಿಯಲ್ಲಿ ಲೀನವಾಯಿತು. ದೀಘಾ ಘಾಟ್ ನಲ್ಲಿ ರಾಮ್ ವಿಲಾಸ್ ಅವರ ಪುತ್ರ ಚಿರಾಗ್ ಪಾಸ್ವನ್ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.
ಅಂತಿಮ ವಿಧಿ ವಿಧಾನ ನೆರವೇರಿಸುತ್ತಿರುವ ಚಿರಾಗ್ ಪಾಸ್ವಾನ್
ಅಂತಿಮ ವಿಧಿ ವಿಧಾನ ನೆರವೇರಿಸುತ್ತಿರುವ ಚಿರಾಗ್ ಪಾಸ್ವಾನ್
Updated on

ಪಾಟ್ನಾ: ರಾಜ್ಯ ಸರ್ಕಾರದ ಗೌರವಾದರಗಳೊಂದಿಗೆ ಎಲ್ ಜೆಪಿ ಸ್ಥಾಪಕ ಮತ್ತು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪಾರ್ಥಿವ ಶರೀರ  ಶನಿವಾರ ಅಗ್ನಿಯಲ್ಲಿ ಲೀನವಾಯಿತು. ದೀಘಾ ಘಾಟ್ ನಲ್ಲಿ ರಾಮ್ ವಿಲಾಸ್ ಅವರ ಪುತ್ರ ಚಿರಾಗ್ ಪಾಸ್ವನ್ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿ ಸುಶೀಲ್ ಶಿಂಧೆ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಆರ್ ಜೆಡಿ ಪಕ್ಷದ ಮುಖಂಡ ತೇಜಸ್ವಿ ಯಾದವ್ ಮತ್ತಿತರರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. 

ಇದಕ್ಕೂ ಮುನ್ನ ರಾಮ್ ವಿಲಾಸ್ ಪಾಸ್ವಾನ್ ಅವರ ನಿವಾಸದಲ್ಲಿ ಬಳಿ ನೆರೆದಿದ್ದ ಅಪಾರ ಸಂಖ್ಯೆಯ ಜನರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡರು.

ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರ ಪಾರ್ಥಿವ ಶರೀರವನ್ನು ದೆಹಲಿಯಿಂದ ಪಾಟ್ನಾಕ್ಕೆ ಶುಕ್ರವಾರ ತರಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com