ಪ್ರಕಾಶ್ ದಾಮಿ
ದೇಶ
ಬಿಜೆಪಿ ಕೌನ್ಸಿಲರ್ ಗೆ ಗುಂಡಿಕ್ಕಿ ಬರ್ಬರ ಹತ್ಯೆ!
ಸಹಿ ಮಾಡಿಸಿಕೊಳ್ಳುವ ನೆಪದಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರನ್ನು ಮನೆಯಿಂದ ಹೊರಗೆ ಕರೆಸಿಕೊಂಡ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ರಾಂಚಿ(ಉತ್ತರಾಖಂಡ): ಸಹಿ ಮಾಡಿಸಿಕೊಳ್ಳುವ ನೆಪದಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರನ್ನು ಮನೆಯಿಂದ ಹೊರಗೆ ಕರೆಸಿಕೊಂಡ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಉತ್ತರಾಖಂಡ್ ದ ರುದ್ರಾಪುರದಲ್ಲಿ ಈ ಘಟನೆ ನಡೆದಿದೆ. ರುದ್ರಾಪುರದ 13ನೇ ಪಾಲಿಕೆ ಸದಸ್ಯ ಪ್ರಕಾಶ್ ದಾಮಿಗೆ ದುಷ್ಕರ್ಮಿಗಳು ಗುಂಡಿಕ್ಕಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದ ದಾಮಿಯನ್ನು ಆಸ್ಪತ್ರೆಗೆ ಕೊಂಡೊಯ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ದುಷ್ಕರ್ಮಿಗಳು ದಾಖಲೆಯೊಂದಕ್ಕೆ ಸಹಿ ಮಾಡಿಸಿಕೊಳ್ಳುವ ನೆಪದಲ್ಲಿ ಮನೆಯಿಂದ ಹೊರಗೆ ಕರೆದಿಸಿಕೊಂಡು ನಂತರ ಗುಂಡಿಕ್ಕಿ ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್ ಪಿ ದೇವೇಂದ್ರ ಪಿಂಚ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ