ತಮಿಳು ನಟ ಧನುಷ್, ಡಿಎಂಕೆ ಮುಖಂಡ ವಿಜಯಕಾಂತ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ  ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಮಂಗಳವಾರ ಎರಡು ಹುಸಿ ಬಾಂಬ್ ಕರೆಗಳು ಬಂದಿವೆ.
ಧನುಷ್
ಧನುಷ್
Updated on

ಚೆನ್ನೈ: ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ  ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಮಂಗಳವಾರ ಎರಡು ಹುಸಿ ಬಾಂಬ್ ಕರೆಗಳು ಬಂದಿವೆ.

ಅನಾಮಧೇಯ ವ್ಯಕ್ತಿಗಳಿಂದ ಕರೆಗಳನ್ನು ಸ್ವೀಕರಿಸಿದ ನಂತರ ಪೊಲೀಸರು  ಧನುಷ್ ಹಾಗೂ ವಿಜಯಕಾಂತ್ ಅವರುಗಳ ಮನೆಗಳಿಗೆ ಬಾಂಬ್ ಪತ್ತೆ ದಳಗಳನ್ನು ಕಳಿಸಿ ಪರಿಶೀಲಿಸಿದ್ದಾರೆ.  ಆದರೆ ಅವೆರಡೂ ಕರೆಗಳು ಹಿಸಿ ಬಾಂಬ್ ಕರೆಗಳೆಂದು ತಿಳಿದುಬಂದಿದೆ. ಸಧ್ಯ ಈ ಕುರಿತಂತೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ಕೆಲವು ತಿಂಗಳುಗಳ ಹಿಂದೆ ನಟ ಸೂರ್ಯ ಅವರ ಕಚೇರಿಯಲ್ಲಿ ಬಾಂಬ್ ಇರಿಸಿದ್ದಾಗಿ ಇಂತಹುದೇ ಹುಸಿ ಕರೆ ಬಂದಿತ್ತು. ಈ ಬಾರಿ ಎರಡೂ ಕರೆಗಳನ್ನು ಒಬ್ಬನೇ ವ್ಯಕ್ತಿ ಮಾಡಿರುವುದಾಗಿ ತಿಳಿದುಬಂದಿದೆ. ಬಾಂಬ್ ಬೆದರಿಕೆ ಕರೆ ಮಾಡಿದ ಆರೋಪಿಯ ಪತ್ತೆಗೆ ಪೊಲೀಸರು ಈಗ ಪ್ರಯತ್ನಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com