ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣವನ್ನು ಒಪ್ಪಿಕೊಂಡ ಕೇಂದ್ರ ಸರ್ಕಾರ

ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದನ್ನು ಇದೇ ಮೊದಲ ಬಾರಿಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಭಾನುವಾರ ಒಪ್ಪಿಕೊಂಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್
ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್
Updated on

ನವದೆಹಲಿ: ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದನ್ನು ಇದೇ ಮೊದಲ ಬಾರಿಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಭಾನುವಾರ ಒಪ್ಪಿಕೊಂಡಿದ್ದಾರೆ.ಆದಾಗ್ಯೂ, ಪ್ರಸ್ತುತ ಕೆಲವೊಂದು ರಾಜ್ಯ ಮತ್ತು ಜಿಲ್ಲೆಗಳಿಗೆ ಮಾತ್ರ ಇದು ಸಿಮೀತವಾಗಿರುವುದಾಗಿ ಅವರು ತಿಳಿಸಿದ್ದಾರೆ.

ವಾರದ ವೆಬಿನಾರ್' ಸಂಡೇ ಸಂವಾದ'ದಲ್ಲಿ ಸಾಮಾಜಿಕ ಮಾಧ್ಯಮಗಳ ಪ್ರೇಕ್ಷಕರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹರ್ಷವರ್ಧನ್, ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದಾಗಿ ಒಪ್ಪಿಕೊಂಡರು.

ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಶೇಷವಾಗಿ ಜನದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ ಕೋವಿಡ್-19 ಸಮುದಾಯ ಹಂತ ತಲುಪಿರುವ ನಿರೀಕ್ಷೆಯಿದೆ. ಆದಾಗ್ಯೂ, ದೇಶಾದ್ಯಂತ ಇದು ತಲುಪಿಲ್ಲ. ಕೆಲವೇ ಜಿಲ್ಲೆಗಳಿಗೆ ಮಾತ್ರ ಇದು ಸೀಮಿತವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com