6 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ತ್ವರಿತ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ- ಪಂಜಾಬ್ ಸಿಎಂ

ಪಂಜಾಬ್ ರಾಜ್ಯದ ಹೊಶಿಯಾರ್ ಪುರ್ ನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಪಂಜಾಬ್ ಸಿಎಂ ಅಮರಿಂದರ್ ಸಿಂಗ್
ಪಂಜಾಬ್ ಸಿಎಂ ಅಮರಿಂದರ್ ಸಿಂಗ್
Updated on

ಹೊಶಿಯಾರ್ ಪುರ್(ಪಂಜಾಬ್): ಪಂಜಾಬ್ ರಾಜ್ಯದ ಹೊಶಿಯಾರ್ ಪುರ್ ನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ಇದು ತೀವ್ರ ಆಘಾತಕಾರಿ ಘಟನೆಯಾಗಿದ್ದು, ಬೇಸರ ಹುಟ್ಟಿಸುತ್ತದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರೂ ಕೂಡ ತ್ವರಿತವಾಗಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಡಿಜಿಪಿಯವರಿಗೆ ಆದೇಶ ನೀಡಿದ್ದೇನೆ.

ನ್ಯಾಯಾಲಯ ಕೂಡ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಸಿಎಂ ಅಮರಿಂದರ್ ಸಿಂಗ್ ಒತ್ತಾಯಿಸಿದ್ದಾರೆ.

ಹೊಶಿಯಾರ್ ಪುರದ ಜಲಾಲ್ ಪುರದಲ್ಲಿ ವಲಸೆ ಕಾರ್ಮಿಕನ ಮಗಳನ್ನು ಕಿಡಿಗೇಡಿಗಳು ಹೊತ್ತೊಯ್ದು ಅತ್ಯಾಚಾರವೆಸಗಿ ಸಜೀವ ದಹನ ಮಾಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com