ದೇಶದ ಎಲ್ಲಾ ಜನರಿಗೂ ಉಚಿತ ಕೋವಿಡ್ ಲಸಿಕೆ: ಕೇಂದ್ರ ಸಚಿವ ಪ್ರತಾಪ್ ಸಾರಂಗಿ

ದೇಶದ ಎಲ್ಲಾ ಜನತೆಗೂ ಉಚಿತ ಕೊರೋನಾ ಲಸಿಕೆ ನೀಡಲಾಗುವುದು ಎಂದು ಹೇಳುವುದರ ಮೂಲಕ ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಎಲ್ಲಾ ಟೀಕೆ-ಟಿಪ್ಪಣಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಪ್ರತಾಪ್ ಚಂದ್ರ ಸಾರಂಗಿ
ಪ್ರತಾಪ್ ಚಂದ್ರ ಸಾರಂಗಿ
Updated on

ನವದೆಹಲಿ: ದೇಶದ ಎಲ್ಲಾ ಜನತೆಗೂ ಉಚಿತ ಕೊರೋನಾ ಲಸಿಕೆ ನೀಡಲಾಗುವುದು ಎಂದು ಹೇಳುವುದರ ಮೂಲಕ ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಎಲ್ಲಾ ಟೀಕೆ-ಟಿಪ್ಪಣಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಬಿಹಾರದ ಜನತೆಗೆ ಉಚಿತ ಕೊರೋನಾ ಲಸಿಕೆ ನೀಡುವುದಾಗಿ ಕಳೆದ ವಾರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದ್ದು ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. 

ಹಲವು ರಾಜಕೀಯ ಪಕ್ಷಗಳು ಈ ಹೇಳಿಕೆಯ ವಿರುದ್ಧ ತಿರುಗಿ ಬಿದ್ದಿದ್ದವು. ದೇಶದಲ್ಲಿ ಒಬ್ಬರಿಗೆ ಲಸಿಕೆ ನೀಡಲು 500 ರು ಖರ್ಚು ಮಾಡಲಾಗುವುದು, ಹೀಗಾಗಿ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡಲಾಗುವುದು ಎಂದು ಪ್ರತಾಪ್ ಚಂದ್ರ ಸಾರಂಗಿ ತಿಳಿಸಿದ್ದಾರೆ.

ದೇಶದ ಎಲ್ಲಾ ಜನರಿಗೆ ಉಚಿತ ಲಸಿಕೆಗಳನ್ನು ನೀಡುವುದಾಗಿ ಪ್ರಧಾನ ಮಂತ್ರಿ ಘೋಷಿಸಿದ್ದಾರೆ. ಪ್ರತಿ ವ್ಯಕ್ತಿಗೆ ಲಸಿಕೆ ಹಾಕಲು 500 ರು ಖರ್ಚು ಮಾಡಲಾಗುವುದು ಎಂದು ಬಾಲಂಗೋರ್ ನಲ್ಲಿ ಮೋದಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com