ರಜೌರಿ: ಉಗ್ರರ ಅಡಗುದಾಣ ಧ್ವಂಸ, ಶಸ್ತ್ರಾಸ್ತ್ರ ವಶ

ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರ ಅಡಗುದಾಣ ಧ್ವಂಸಗೊಳಿಸಿ, ಚೀನಾದ ಪಿಸ್ತೂಲ್ ಮತ್ತು ಸ್ಫೋಟಕಗಳೂ ಒಳಗೊಂಡಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಿವೆ.
ಭಾರತೀಯ ಸೇನೆ
ಭಾರತೀಯ ಸೇನೆ
Updated on

ಜಮ್ಮು: ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರ ಅಡಗುದಾಣ ಧ್ವಂಸಗೊಳಿಸಿ, ಚೀನಾದ ಪಿಸ್ತೂಲ್ ಮತ್ತು ಸ್ಫೋಟಕಗಳೂ ಒಳಗೊಂಡಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಿವೆ.

ಗಂಭೀರ್ ಮುಘಲನ್ ಅರಣ್ಯದ ಸಮೀಪ, ಜಮ್ಮು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ ಯೋಧರು ಶುಕ್ರವಾರ ಉಗ್ರಗಾಮಿಗಳು ಅಡಗುತಾಣದಲ್ಲಿ ಇಟ್ಟುಕೊಂಡಿದ್ದ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೌರಿ ಚಂದನ್ ಕೊಹ್ಲಿ ಹೇಳಿದ್ದಾರೆ. 

ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಜಮ್ಮು ಕಾಶ್ಮೀರ ಪೊಲೀಸರ ಸಹಯೋಗದೊಡನೆ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ಆರಂಭಿಸಿದ ಬಳಿಕ ಗಂಭೀರ್ ಮುಘಲನ್ ನ ದಟ್ಟಾರಣ್ಯವನ್ನು ಬಳಸಿ ಕಾಡಿನ ಮೇಲ್ಮೈ ಕೆಳಗೆ ರಚಿಸಲಾದ ಅಡಗುತಾಣವನ್ನು ಕಂಡುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com