ಕಲಬುರಗಿ: ಬಂಜಾರಾ ಸಮಾಜದ ಆರಾಧ್ಯ ದೈವರಾಗಿದ್ದ ಜಗದ್ಗುರು ಡಾ.ರಾಮರಾವ್ ಮಹಾರಾಜ್ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಡಾ.ರಾಮರಾವ್ ಮಹಾರಾಜ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶ್ರೀಗಳು ಮುಂಬೈ ಬಳಿಯ ಪೌರಾದೇವಿಯಲ್ಲಿರುವ ಶಕ್ತಿಪೀಠದ ಜಗದ್ಗುರು ಆಗಿದ್ದರು. ಸ್ವಾಮೀಜಿಗಳ ನಿಧನಕ್ಕೆ ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಸಂತಾಪ ಸೂಚಿಸಿದ್ದಾರೆ.
ಮಹಾರಾಷ್ಟ್ರದಲ್ಲಿರುವ ಪೌರಾಗಢದ ಪೀಠಧಿಪತಿಗಳಾಗಿದ್ದ ಶ್ರೀರಾಮರಾವ್ ಮಹಾರಾಜ್ ಬಂಜಾರರ ಕುಲಗುರು ಸಂತ ಸೇವಾಲಾಲರ ಕುಲದವರಾಗಿದ್ದರು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಡ ರಾತ್ರಿ ಮೃತಪಟ್ಟಿದ್ದಾರೆ. ಶ್ರೀಗಳು ದೇಶಾದ್ಯಂತ ನೆಲೆಸಿರುವ ಬಂಜಾರಾ ಸಮುದಾಯದ ಗುರುಗಳಾಗಿದ್ದರು. ಸ್ವಾಮೀಜಿಗಳ ನಿಧನಕ್ಕೆ ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
Advertisement