ಕಾಶ್ಮಿರ: ಶೂಟ್ ಮಾಡಿಕೊಂಡು ಸಿಆರ್ ಪಿಎಫ್ ಎಎಸ್ ಐ ಆತ್ಮಹತ್ಯೆಗೆ ಶರಣು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕೇಂದ್ರ ರಿಸರ್ವ್ ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಸಬ್ ಇನ್ಸ್‌ಪೆಕ್ಟರ್(ಎಎಸ್‌ಐ)ರೊಬ್ಬರು ತಮ್ಮ ಸರ್ವಿಸ್ ರಿವಾಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಭದೆರ್ವಾಹ್: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕೇಂದ್ರ ರಿಸರ್ವ್ ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಸಬ್ ಇನ್ಸ್‌ಪೆಕ್ಟರ್(ಎಎಸ್‌ಐ)ರೊಬ್ಬರು ತಮ್ಮ ಸರ್ವಿಸ್ ರಿವಾಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

33 ನೇ ಬೆಟಾಲಿಯನ್‌ನ ಎಎಸ್ ಐ ಅಮೃತ್ ಭರದ್ವಾಜ್ (52) ಅವರು ರಾತ್ರಿ ಪಾಳಿ ಕರ್ತವ್ಯದ ನಂತರ ಕೋಟ್ಲಿಯ ಪೊಲೀಸ್ ಸಂಕೀರ್ಣದ ತಮ್ಮ ಬ್ಯಾರಕ್‌ಗೆ ಮರಳಿದ ಕೂಡಲೇ ಶೂಟ್ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಇಂದು ಬೆಳಗ್ಗೆ 7.30 ರ ಸುಮಾರಿಗೆ ಈ ಘಟನೆ ನಡೆದಿದೆ ಮತ್ತು ಎಎಸ್ಐ ಅನ್ನು ತಕ್ಷಣವೇ ಉಪ-ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಎಎಸ್ ಐ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು" ಎಂದು ಭದೆರ್ವಾ ಪೊಲೀಸ್ ವರಿಷ್ಠಾಧಿಕಾರಿ ರಾಜ್ ಸಿಂಗ್ ಗೌರಿಯಾ ಹೇಳಿದ್ದಾರೆ.

ಈ ಸಂಬಂಧ ಭದೆರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com