ಗಡಿ ಸಂಘರ್ಷ:ರಾಜನಾಥ್ ಸಿಂಗ್ ಜೊತೆ ಶಾಂಘೈ ಶೃಂಗಸಭೆ ಹೊರಗೆ ಮಾತುಕತೆ ನಡೆಸಲು ಚೀನಾ ರಕ್ಷಣಾ ಸಚಿವ ಒಲವು?

ರಷ್ಯಾದ ಮಾಸ್ಕೊದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘದ ಸಭೆಯ ಹೊರಗೆ ಚೀನಾದ ರಕ್ಷಣಾ ಸಚಿವ ವೈ ಫೆಂಗಿ, ಭಾರತ-ಚೀನಾ ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಲು ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Updated on

ನವದೆಹಲಿ: ರಷ್ಯಾದ ಮಾಸ್ಕೊದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘದ ಸಭೆಯ ಹೊರಗೆ ಚೀನಾದ ರಕ್ಷಣಾ ಸಚಿವ ವೈ ಫೆಂಗಿ, ಭಾರತ-ಚೀನಾ ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಲು ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಬಲ್ಲ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಭಾರತದ ರಕ್ಷಣಾ ಸಚಿವರೊಂದಿಗೆ ಚರ್ಚೆ ನಡೆಸಲು ಚೀನಾದ ರಕ್ಷಣಾ ಸಚಿವರು ಉತ್ಸುಕರಾಗಿದ್ದಾರೆ, ಈ ಬಗ್ಗೆ ಭಾರತದ ರಾಯಭಾರಿಗೆ ಹೇಳಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ. 4 ದಿನಗಳ ಹಿಂದೆ ಮತ್ತೆ ಲಡಾಕ್ ನ ಪಾಂಗೊಂಗ್ ಸರೋವರದ ದಕ್ಷಿಣ ತೀರ ಪ್ರಾಂತ್ಯವನ್ನು ಆಕ್ರಮಿಸಿಕೊಳ್ಳಲು ಚೀನಾ ಸೇನೆ ಮುನ್ನುಗ್ಗಿದ ಬಳಿಕ ಗಡಿಯಲ್ಲಿ ಮತ್ತಷ್ಟು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 4 ತಿಂಗಳಿನಿಂದ ಭಾರತ ಮತ್ತು ಚೀನಾ ದೇಶಗಳು ಗಡಿಯ ವಿವಾದ ವಿಚಾರವಾಗಿ ಹಲವು ಸುತ್ತಿನ ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದ ಮಾತುಕತೆಯಲ್ಲಿ ತೊಡಗಿವೆ ಹೊರತು ಇದುವರೆಗೆ ಪರಿಹಾರಕ್ಕೆ ಬಂದಿಲ್ಲ.

ಭಾರತ ಪಾಂಗೊಂಗ್ ಲೇಕ್, ಫಿಂಗರ್ 2 ಮತ್ತು ಫಿಂಗರ್ 3 ಪ್ರದೇಶಗಳಲ್ಲಿ ತನ್ನ ಸೇನಾಪಡೆ ನಿಯೋಜನೆಯನ್ನು ಹೆಚ್ಚಿಸಿದೆ. ಭಾರತದ ಈ ನಡೆಗೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com