ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ:ಟ್ರಕ್ ಗೆ ಬಸ್ ಡಿಕ್ಕಿ, 7 ಮಂದಿ ದುರ್ಮರಣ, 7 ಮಂದಿಗೆ ಗಾಯ

ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದು ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ರಾಯ್ಪುರದಲ್ಲಿ ನಡೆದಿದೆ.
ನುಜ್ಜುಗುಜ್ಜಾದ ಬಸ್
ನುಜ್ಜುಗುಜ್ಜಾದ ಬಸ್
Updated on

ರಾಯ್ಪುರ(ಛತ್ತೀಸ್ ಗಢ): ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದು ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ರಾಯ್ಪುರದಲ್ಲಿ ನಡೆದಿದೆ.

ಒಡಿಶಾದ ಗಂಜಮ್ ನಿಂದ ಗುಜರಾತ್ ನ ಸೂರತ್ ಗೆ ಬಸ್ ಪ್ರಯಾಣಿಸುತ್ತಿತ್ತು. ಇಂದು ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದೆ ಎಂದು ರಾಯ್ಪುರದ ಎಸ್ ಎಸ್ ಪಿ ಅಜಯ್ ಯಾದವ್ ತಿಳಿಸಿದ್ದಾರೆ.

ಪರಿಹಾರ ಘೋಷಣೆ:ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಪಘಾತದಲ್ಲಿ ತೊಂದರೆಗೀಡಾದವರ ಕುಟುಂಬಗಳ ನೆರವಿಗೆ ತಕ್ಷಣ ಧಾವಿಸುವಂತೆ ಸಿಎಂ ನವೀನ್ ಪಟ್ನಾಯಕ್ ಸಚಿವ ಸುಶಾಂತ್ ಸಿಂಗ್ ಅವರಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com