ನವ ದೆಹಲಿ: ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ಜನತೆ ಆತಂಕಪಡಬೇಕಾದ ಅಗತ್ಯವಿಲ್ಲ- ಕೇಜ್ರಿವಾಲ್ 

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಜನರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಜನರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಆಮ್ ಆದ್ಮಿ ಸರ್ಕಾರ ಕೋವಿಡ್-19 ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಾಗಿ ಮಾಡುತ್ತಿರುವುದರಿಂದ ಹೆಚ್ಚಿನ ಕೊರೋನಾ ವೈರಸ್ ಪ್ರಕರಣಗಳು  ಕಂಡುಬಂದಿವೆ ಎಂದು ಕೇಜ್ರಿವಾಲ್ ಆನ್ ಲೈನ್ ಮಾಧ್ಯಮದಲ್ಲಿ ವಿವರಿಸಿದ್ದಾರೆ.

ಜನರು ನಿರ್ಲಕ್ಷ್ಯ ತೋರದೆ ಕೋವಿಡ್-19 ವಿರುದ್ಧದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಕೈಗೊಂಡ ಅನೇಕ ಕ್ರಮಗಳಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ಸಾವಿನ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ.

ಕೋವಿಡ್-19 ರೋಗಿಗಳಿಗೆ ಆಸ್ಪತ್ರೆಯಲ್ಲಿ  ಹಾಸಿಗೆಗಳ ಕೊರತೆಯಿಲ್ಲ, 14 ಸಾವಿರ ಹಾಸಿಗೆಗಳ ಪೈಕಿಯಲ್ಲಿ 5 ಸಾವಿರ ಹಾಸಿಗೆಗಳನ್ನು ಮಾತ್ರ ಪಡೆಯಲಾಗಿದೆ. ಈ ಪೈಕಿ 1600 ರಿಂದ 1700 ಹಾಸಿಗೆಗಳನ್ನು ಇತರ ರಾಜ್ಯಗಳಿಗೆ ಸೇರಿದ ರೋಗಿಗಳಿಗೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ  69 ದಿನಗಳಲ್ಲಿ ಅತಿ ಹೆಚ್ಚು ಎನ್ನಬಹುದಾದ ದಾಖಲೆಯ 2,914 ಹೊಸ ಪ್ರಕರಣಗಳು ಕಂಡುಬಂದಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com