ರಾಂಚಿ: ತಡರಾತ್ರಿ ಆಶ್ರಮಕ್ಕೆ ನುಗ್ಗಿದ್ದ ನಾಲ್ವರು ಸಾಧ್ವಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಜಾರ್ಖಂಡ್ ನ ಗೊಡ್ಡಾ ಜಿಲ್ಲೆಯಲ್ಲಿನ ಆಶ್ರಮವೊಂದಕ್ಕೆ ತಡರಾತ್ರಿ ನುಗ್ಗಿದ ನಾಲ್ವರು ಕಾಮುಕರು ಸಾಧುಗಳನ್ನು ಒಂದು ರೂಮಿನಲ್ಲಿ ಕೂಡಿ ಹಾಕಿ ಬೀಗ ಜಡಿದಿದ್ದಾರೆ. ನಂತರ ಆಶ್ರಮದಲ್ಲಿದ್ದ 38 ವರ್ಷದ ಸಾಧ್ವಿಗೆ ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಈ ವೇಳೆ ಸಾಧ್ವಿ ಮೇಲಿನ ಅತ್ಯಾಚಾರವನ್ನು ತಡೆಯಲು ಬಂದ ಸಾಧುವೊಬ್ಬರನ್ನು ಆರೋಪಿಗಳು ಥಳಿಸಿದ್ದಾರೆ. ಗ್ಯಾಂಗ್ ರೇಪ್ ಸಂಬಂಧ ಸಾಧ್ವಿ ಪೊಲೀಸ್ ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದಾರೆ. ಈ ದೂರಿನನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಘಟನೆ ಸಂಬಂಧ ಅದಾಗಲೇ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಇನ್ನು ಪರಾರಿಯಾಗಿರುವ ಮೂವರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
Advertisement