ಚಾಮರಾಜನಗರ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೇ ರೈತನೋರ್ವ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆಲೂರಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಾಮರಾಜನಗರ: ಸಾಲಬಾಧೆ ತಾಳಲಾರದೇ ರೈತನೋರ್ವ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆಲೂರಿನಲ್ಲಿ ನಡೆದಿದೆ.

ಗ್ರಾಮದ ರೈತ ನಾಗೇಂದ್ರ (44)ಮೃತ ದುರ್ದೈವಿ. 5 ಎಕರೆ ಜಮೀನನ್ನು ಗುತ್ತಿಗೆ ಪಡೆದು ಕಬ್ಬು ಹಾಕಿದ್ದ ರೈತ ಬೆಳೆ ಕೈಗೆ ಬಾರದೇ ನಷ್ಟ ಅನುಭವಿಸಿ ಕೈ ಸುಟ್ಟುಕೊಂಡಿದ್ದ ಎಂದು ತಿಳಿದು ಬಂದಿದೆ.

ಬ್ಯಾಂಕ್ ಹಾಗೂ ಕೈ ಸಾಲ ಹೆಚ್ಚಾಗಿದ್ದರಿಂದ ಬುಧವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಶವವಿದ್ದು, ಮೃತನ ಸಂಬಂಧಿಕರ ದೂರಿನ ಮೇಲೆ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದಾರೆ. 
-ಗುಳಿಪುರ ನಂದೀಶ ಎಂ

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com