ನವದೆಹಲಿ: ಮುಂಗಾರು ಅಧಿವೇಶನ ಪ್ರಾರಂಭವಾಗಿರುವ ಸಂದರ್ಭದಲ್ಲೇ ಹಲವಾರು ಸಂಸದರು ಹಾಗೂ ಸಚಿವರಿಗೆ ಕೊರೋನಾ ಸೋಂಕು ತಗುಲಿದೆ. ಈ ಪಟ್ಟಿಗೆ ಕೇಂದ್ರ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೂ ಸೇರ್ಪಡೆಯಾಗಿದ್ದಾರೆ.
ಟ್ವಿಟರ್ ನಲ್ಲಿ ಬರೆದಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯರನ್ನು ಸಂಪರ್ಕಿಸಿದಾಗ ಪರೀಕ್ಷೆಯಲ್ಲಿ ಕೋವಿಡ್-19 ಟೆಸ್ಟ್ ಪಾಸಿಟೀವ್ ಬಂದಿದೆ. ನಿಮ್ಮೆಲ್ಲರ ಶುಭ ಹಾರೈಕೆಗಳೇ ನನಗೆ ರಕ್ಷೆಯಾಗಿದೆ. ಸ್ವಯಂ ಐಸೋಲೇಷನ್ ಗೆ ಒಳಗಾಗಿದ್ದೇನೆ ಎಂದು ತಿಳಿಸಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಗಾಗಬೇಕೆಂದೂ ಮನವಿ ಮಾಡಿದ್ದಾರೆ.
ಅಮಿತ್ ಶಾ, ಧರ್ಮೇಂದ್ರ ಪ್ರಧಾನ್, ರಾಮ್ ಮೇಘವಾಲ್ ಸೇರಿದಮ್ತೆ ಪ್ರಧಾನಿ ನರೇಂದ್ರ ಮೋದಿ ಸಂಪುಟದ 7 ಸಚಿವರಿಗೆ ಕೊರೋನಾ ಸೋಂಕು ತಗುಲಿತ್ತು.
Advertisement