ಶೇ. 30 ರಷ್ಟು ಸಂಸದರ ವೇತನ ಕಡಿತ ಮಸೂದೆಗೆ ರಾಜ್ಯಸಭೆ ಅಂಗೀಕಾರ

 ಸಂಸದರ ವೇತನ, ಭತ್ಯೆಯನ್ನು ಶೇ. 30 ರಷ್ಟು ಕಡಿತಗೊಳಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ಸಂಸತ್
ಸಂಸತ್
Updated on

ನವದೆಹಲಿ: ಸಂಸದರ ವೇತನ, ಭತ್ಯೆಯನ್ನು ಶೇ. 30 ರಷ್ಟು ಕಡಿತಗೊಳಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಇದಕ್ಕೂ ಮುನ್ನ ಕೇಂದ್ರ ಸಚಿವರಾದ ಜಿ. ಕಿಶನ್ ರೆಡ್ಡಿ ಮತ್ತು ಪ್ರಹ್ಲಾದ್ ಜೋಷಿ, ಸಚಿವರ ವೇತನ, ಭತ್ಯೆ ತಿದ್ದುಪಡಿ ಹಾಗೂ ಸಂಸದರ ವೇತನ, ಭತ್ಯೆ, ಪಿಂಚಣಿ ಮಸೂದೆ 2020ನ್ನು ರಾಜ್ಯಸಭೆಯಲ್ಲಿ ಮಂಡಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪರವಾಗಿ ಮಸೂದೆಯನ್ನು ಮಂಡಿಸುತ್ತಿರುವುದಾಗಿ ಗೃಹ ಖಾತೆ ಸಹಾಯಕ ಸಚಿವರು ರಾಜ್ಯಸಭೆಯಲ್ಲಿ ಹೇಳಿದರು. ಮಸೂದೆಗೆ ಬೆಂಬಲ ಸೂಚಿಸಿದ ಕಾಂಗ್ರೆಸ್, ಬಿಜೆಡಿ ಮತ್ತಿತರ ಪಕ್ಷಗಳ ಸದಸ್ಯರು, ಸಂಸದರ ಪ್ರದೇಶಾಭಿವೃದ್ಧಿ ನಿಧಿಯನ್ನು ಆದಷ್ಟು ಬೇಗ ಪುನರ್ ಸ್ಥಾಪಿಸಬೇಕೆಂದು ಕೇಂದ್ರ ಸರ್ಕಾರವನ್ನು ಕೋರಿದರು.

ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ತಮ್ಮ ಕ್ಷೇತ್ರದಲ್ಲಿ ಜನರಿಗೆ ನೆರವಾಗಲು ಸಂಸದರ ಪ್ರದೇಶಾಭಿವೃದ್ಧಿಯನ್ನು ನಿಧಿಯನ್ನು ಬಳಸಿಕೊಳ್ಳಬಹುದಾಗಿದೆ ಎಂದು ಸಂಸದರು ಹೇಳಿದರು.ಸೋಮವಾರದಿಂದ ಆರಂಭವಾಗಿರುವ ಸಂಸತ್ತಿನ ಮುಂಗಾರು ಅಧಿವೇಶನ ಅಕ್ಟೋಬರ್ 1 ರಂದು ಕೊನೆಗೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com