ಎನ್ಎಲ್ಎಸ್ಐಯು ಬೆಂಗಳೂರಿನ ಎನ್ಎಲ್ಎಟಿ-2020 ನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಬೆಂಗಳೂರಿನ ಎನ್ಎಲ್ಎಸ್ಐಯು ನ ಬಿಎ.ಎಲ್ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್ಎಲ್ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ಬೆಂಗಳೂರಿನ ಎನ್ಎಲ್ಎಸ್ಐಯು ನ ಬಿಎ.ಎಲ್ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್ಎಲ್ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. 

ಎಲ್ಲಾ 22 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲ (ಎನ್ಎಲ್ ಯುಎಸ್) ನಲ್ಲಿ ಪ್ರವೇಶವನ್ನು ಸೆ.28 ರಂದು ನಡೆಯಲಿರುವ ಸಿಎಲ್ಎಟಿ-2020 ಗೆ ಅನುಗುಣವಾಗಿಯೇ ನಡೆಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. 

ಎನ್ಎಲ್ಎಸ್ಐಯುನ ಮಾಜಿ ಉಪಕುಲಪತಿ ಪ್ರೊಫೆಸರ್ ಆರ್ ವೆಂಕಟ ರಾವ್ ಹಾಗೂ ಆಕಾಂಕ್ಷಿಯೊಬ್ಬರ ಪೋಷಕರು ಎನ್ಎಲ್ಎಟಿ-2020ಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಲ್ಲಿ ನ್ಯಾ. ಅಶೋಕ್ ಭೂಷಣ್ ಅವರಿದ್ದ ಪೀಠ ಈ ಆದೇಶ ನೀಡಿದೆ. 

ನ್ಯಾ.ಆರ್ ಎಸ್ ರೆಡ್ಡಿ ಹಾಗೂ ಎಂಆರ್ ಶಾ ಅವರಿದ್ದ ಪೀಠ, ಎನ್ಎಲ್ ಯು ಗಳು ಅಕ್ಟೋಬರ್ ಮಧ್ಯದ ವೇಳೆಗೆ ತಮ್ಮ ಶೈಕ್ಷಣಿಕ ತರಗತಿಗಳನ್ನು ಪ್ರಾರಂಭಿಸಬೇಕೆಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com