ರೈತರು ಕರೆ ನೀಡಿರುವ 'ಭಾರತ್ ಬಂದ್ 'ಗೆ ಕಾಂಗ್ರೆಸ್ ಬೆಂಬಲ

ರೈತ ಸಂಘಟನೆಗಳು ಶುಕ್ರವಾರ ಕರೆ ನೀಡಿರುವ ಭಾರತ್ ಬಂದ್ ಗೆ  ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ಪಕ್ಷದ  ಲಕ್ಷಾಂತರ ಕಾರ್ಯಕರ್ತರು ರೈತರ ಉದ್ದೇಶಕ್ಕೆ ಒಗ್ಗಟ್ಟಿನಿಂದ ನಿಲ್ಲುತ್ತಾರೆ ಮತ್ತು ಅವರು ನಡೆಸುವ ಧರಣಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದೆ.
ರಣದೀಪ್ ಸುರ್ಜೇವಾಲಾ
ರಣದೀಪ್ ಸುರ್ಜೇವಾಲಾ
Updated on

ನವದೆಹಲಿ: ರೈತ ಸಂಘಟನೆಗಳು ಶುಕ್ರವಾರ ಕರೆ ನೀಡಿರುವ ಭಾರತ್ ಬಂದ್ ಗೆ  ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ.
ಪಕ್ಷದ ಲಕ್ಷಾಂತರ ಕಾರ್ಯಕರ್ತರು ರೈತರ ಉದ್ದೇಶಕ್ಕೆ ಒಗ್ಗಟ್ಟಿನಿಂದ ನಿಲ್ಲುತ್ತಾರೆ ಮತ್ತು ಅವರು ನಡೆಸುವ ಧರಣಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದೆ.

ರೈತರು ಮತ್ತು ಕೃಷಿ ಕಾರ್ಮಿಕರು ತಮ್ಮ ಕಠಿಣ ಪರಿಶ್ರಮದಿಂದ ದೇಶದ ಜನರ ಹೊಟ್ಟೆಯನ್ನು ತುಂಬಿಸುತ್ತಿದ್ದರೆ ಮೋದಿ ಸರ್ಕಾರ ಅವರ ಮೇಲೆ ಮತ್ತು ಅವರ ಹೊಲಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ರೈತರೊಂದಿಗೆ ದೃಢ ವಾಗಿ ನಿಂತು ಭಾರತ್ ಬಂದ್ ಅನ್ನು ಬೆಂಬಲಿಸುತ್ತಾರೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ರೈತರ ಧರಣಿ ಮತ್ತು ಪ್ರತಿಭಟನೆಯಲ್ಲಿ ಸೇರಿಕೊಳ್ಳಲಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಭಾರತ್ ಬಂದ್ ನಲ್ಲಿ ರೈತರ ಕೂಗು ದೇಶಾದ್ಯಂತ ಪ್ರತಿಧ್ವನಿಸಲಿದೆ ಎಂದು ಸುರ್ಜೆವಾಲಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com