ರೈತ ವಿರೋಧಿ ನಿಲುವು ತೆಗೆದುಕೊಂಡಿರುವ ಕಾಂಗ್ರೆಸ್ ಸೂಕ್ತ ಬೆಲೆ ತೆತ್ತಲಿದೆ: ಕಿರಣ್ ರಿಜಿಜು

ಕೃಷಿ ಮಸೂದೆ ಬಗ್ಗೆ ಜನರನ್ನು ದಾರಿ ತಪ್ಪಿಸಿ ರೈತರ ವಿರೋಧಿ ನಿಲುವು ತೆಗೆದುಕೊಂಡಿರುವ ಕಾಂಗ್ರೆಸ್ ಇದಕ್ಕಾಗಿ ತಕ್ಕ ಬೆಲೆ ತೆರಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಕಿರಣ್ ರಿಜಿಜು
ಕಿರಣ್ ರಿಜಿಜು
Updated on

ನವದೆಹಲಿ: ಕೃಷಿ ಮಸೂದೆ ಬಗ್ಗೆ ಜನರನ್ನು ದಾರಿ ತಪ್ಪಿಸಿ ರೈತರ ವಿರೋಧಿ ನಿಲುವು ತೆಗೆದುಕೊಂಡಿರುವ ಕಾಂಗ್ರೆಸ್ ಇದಕ್ಕಾಗಿ ತಕ್ಕ ಬೆಲೆ ತೆರಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಸಿದಂತೆ ಪ್ರತಿಕ್ರಿಸಿರುವ ಕಿರಣ್ ಕಾಂಗ್ರೆಸ್ ತಕ್ಕಬೆಲೆ ತೆರಲಿದೆ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ ಇಂಡಿಯಾ ಗೇಟ್ ಬಳಿ ಆಗಮಿಸಿದ ಪಂಜಾಬ್ ಯೂತ್ ಕಾಂಗ್ರೆಸ್  ನ ಸುಮಾರು 15-20 ಕಾರ್ಯಕರ್ತರು ಟ್ರಾಕ್ಟರ್ ಗೆ ಬೆಂಕಿ ಹಚ್ಚಿದ್ದರು. ಜನರನ್ನು ದಾರಿ ತಪ್ಪಿಸುತ್ತಿರುವ ಕಾಂಗ್ರೆಸ್ ಇದಕ್ಕಾಗಿ ಸೂಕ್ತ ಬೆಲೆ ತೆರಬೇಕಾಗುತ್ತದೆ. ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡುತ್ತಿದೆ ಎಂದು ದೂರಿದ್ದಾರೆ. ಇನ್ನೂ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಕೂಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com