9 ಉಗ್ರರನ್ನು ಹೊಡೆದುರುಳಿಸಿದ್ದ ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ 9 ಉಗ್ರರನ್ನು ಹೊಡೆದುರುಳಿಸಿದ್ದು ಇದೇ ಕಾರ್ಯಾಚರಣೆ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ 9 ಉಗ್ರರನ್ನು ಹೊಡೆದುರುಳಿಸಿದ್ದು ಇದೇ ಕಾರ್ಯಾಚರಣೆ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣೆಯಿಂದಾಗಿ ಲಾಕ್ ಡೌನ್ ನಿಂದಾಗಿ ಇಡೀ ದೇಶವೇ ಆತಂಕದಲ್ಲಿದ್ದು, ಇದೇ ಸಂದರ್ಭದಲ್ಲಿ ಅತ್ತ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಬಾಲ ಬಿಚ್ಚಲು ಯತ್ನಿಸಿದ 9 ಮಂದಿ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು.

ದಕ್ಷಿಣ ಕಾಶ್ಮೀರದ ಬಾಟ್ಪುರ್ ದಲ್ಲಿ ನಿನ್ನೆ 4 ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು ಎಲ್ಒಸಿಯ ಕೆರಾನ್ ಸೆಕ್ಟರ್ ನಲ್ಲಿ ಮತ್ತೆ 5 ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿತ್ತು. 

ಇನ್ನು ಕಾರ್ಯಾಚರಣೆ ವೇಳೆ ಹಲವು ಯೋಧರು ಗಂಭೀರವಾಗಿ ಗಾಯಗೊಂಡಿದ್ದು ಇದೀಗ ಮೂವರು ಹುತಾತ್ಮರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com