ಆಶಾ ಕಾರ್ಯಕರ್ತರು, ನರ್ಸ್, ಅಂಗನವಾಡಿ ಕಾರ್ಯಕರ್ತರು ನಿಜವಾದ ದೇಶ ಭಕ್ತರು: ರಾಹುಲ್ ಶ್ಲಾಘನೆ

ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ತ್ಯಾಗವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ತ್ಯಾಗವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.

ಅಗತ್ಯದ ಸಂದರ್ಭದಲ್ಲಿ ದೇಶಕ್ಕಾಗಿ ದುಡಿಯುವುದೇ ನಿಜವಾದ ದೇಶಭಕ್ತಿ. ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರು ನಿಜವಾದ ದೇಶಭಕ್ತರು. ಮುಖ್ಯವಾಹಿನಿಯಿಂದ ದೂರವುಳಿದು ಜನರ ಸುರಕ್ಷತೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೊಗಳಿದ್ದಾರೆ. 

ಭಯ ಹಾಗೂ ತಪ್ಪು ಮಾಹಿತಿಗಳು ವೈರಸ್ ಗಿಂತ ಅಪಾಯಕಾರಿಯಾಗಿರುವ ಪರಿಸ್ಥಿತಿಯಲ್ಲಿ ಸಮುದಾಯ ಕಾರ್ಯಕರ್ತರು ಜನರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದಿದ್ದಾರೆ. 

ಒಂದು ದೇಶವಾಗಿ ನಾವು ಅವರಿಗೆ ಆಭಾರಿಯಾಗಿದ್ದೇವೆ. ಈ ಬಿಕ್ಕಟ್ಟು ಶಮನವಾದ ನಂತರ ಅವರ ಅಪೂರ್ವ ಕೊಡುಗೆಯನ್ನು ಗುರುತಿಸಿ ಅವರು ಕೆಲಸದ ಪರಿಸ್ಥಿತಿಗಳು ಸುಧಾರಣೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com