ನವದೆಹಲಿ: ಎಲ್ಲಾ ಕೇಂದ್ರ ಸಚಿವರು ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಸೋಮವಾರದಿಂದ ಕಚೇರಿಗೆ ಆಗಮಿಸಿ ಕೆಲಸ ಮಾಡಬೇಕು ಎಂದು ಶನಿವಾರ ಕೇಂದ್ರ ಸರ್ಕಾರ ಸೂಚಿಸಿದೆ.
ಲಾಕ್ ಡೌನ್ ನಂತರದ ಆರ್ಥಿಕ ಸ್ಥಿತಿ ಸುಧಾರಿಸುವ ಕುರಿತು ಯೋಜನೆ ರೂಪಿಸಲು ಎಲ್ಲಾ ಸಚಿವರು ಮತ್ತು ಜಂಟಿ ಕಾರ್ಯದರ್ಶಿಗಳು ಮತ್ತು ಅದಕ್ಕು ಮೇಲ್ಪಟ್ಟ ಎಲ್ಲಾ ಅಧಿಕಾರಿಗಳು ಸೋಮವಾರದಿಂದ ಕಚೇರಿಗೆ ಆಗಮಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.
ಕೇಂದ್ರ ಸರ್ಕಾರದ ಎಲ್ಲಾ ಸಚಿವರು ಸೋಮವಾರದಿಂದ ಕಚೇರಿಗಳಿಗೆ ತೆರಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದು, ಕೆಲಸ ಮಾಡುವ ವೇಳೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.
ಸರ್ಕಾರ ಕೊವಿಡ್-19 ಹಾಟ್ ಸ್ಪಾಟ್ ಗಳ ಬಗ್ಗೆ ಹೆಚ್ಚು ಗಮನಹರಿಸುತ್ತಿದೆ ಮತ್ತು ಲಾಕ್ ಡೌನ್ ಅಂತ್ಯವಾದ ನಂತರ ದೇಶದ ಆರ್ಥಿಕತೆಗೆ ಉತ್ತೇಜನ ನೀಡುವ ಯತ್ನ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
Advertisement