ನವದೆಹಲಿ: ತಬ್ಲಿಘಿ ಜಮಾತ್ ಮುಖಂಡ ಮೌಲಾನಾ ಸಾದ್ ಕಂಧಲ್ವಿ ವಿರುದ್ಧ ಜಾರಿ ನಿರ್ದೇಶನಾಲಯವು ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿದೆ.
ದೆಹಲಿ ಪೊಲೀಸ್ ಎಫ್ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ ಪ್ರಕರಣ ಮಾಹಿತಿ ವರದಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಾದ್ ವಿರುದ್ಧ ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೊರೋನಾ ಹಿನ್ನೆಲೆ ಬೃಹತ್ ಸಭೆ ಸಮಾರಂಭಗಳ ನಡೆಸಬಾರದೆಂಬ ಆದೇಶ ಧಿಕ್ಕರಿಸಿದ ಆರೋಪದ ಮೇಲೆ ತಬ್ಲಿಘಿ ಜಮಾತ್ ಮುಖ್ಯಸ್ಥ ಸೇರಿ ಏಳು ಮಂದಿ ವಿರುದ್ಧ ದೆಹಲಿ ಪೊಲೀಸರ ಅಪರಾಧ ವಿಭಾಗವು ಮಾರ್ಚ್ 31 ರಂದು ಎಫ್ಐಆರ್ ದಾಖಲಿಸಿಸಿದ್ದರು.
Advertisement