ಮಹಾರಾಷ್ಟ್ರ: ಕಾರಿನಲ್ಲಿದ್ದ ಮೂವರನ್ನು ಹೊಡೆದು ಕೊಂದ ಗ್ರಾಮಸ್ಥರು

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಾಡ್ಚಿಂಚಲೆ ಗ್ರಾಮದ ಧಾಬಡಿ-ಖಾನ್ವೆಲ್ ರಸ್ತೆಯಲ್ಲಿ ಕಾರಿನಲ್ಲಿದ್ದ ಮೂವರನ್ನು ಗ್ರಾಮಸ್ಥರು ಹೊಡೆದು ಕೊಂದ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಾಡ್ಚಿಂಚಲೆ ಗ್ರಾಮದ ಧಾಬಡಿ-ಖಾನ್ವೆಲ್ ರಸ್ತೆಯಲ್ಲಿ ಕಾರಿನಲ್ಲಿದ್ದ ಮೂವರನ್ನು ಗ್ರಾಮಸ್ಥರು ಹೊಡೆದು ಕೊಂದ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ಸುಮಾರು ರಾತ್ರಿ 9.30ಕ್ಕೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಲಾಕ್ ಡೌನ್ ಸಮಯದಲ್ಲಿ ಹಳ್ಳಿಗಳಲ್ಲಿ ದರೋಡೆಕೋರರು ಮತ್ತು ಡಕಾಯಿತರು ಸಕ್ರಿಯರಾಗಿದ್ದಾರೆ ಎಂಬ ವ್ಯಾಪಕ ವದಂತಿಗಳು ಕಾರಿನಲ್ಲಿದವರ ಮೇಲೆ ದಾಳಿ ನಡೆಸಲು ಕಾರಣವಾಗಿರಬಹುದು. ಈ ಮೂವರ ಮೇಲೆ ಕಲ್ಲು ಮತ್ತು ಹರಿತವಾದ ಶಸ್ತ್ರಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ಈವರೆಗೆ ಯಾರನ್ನೂ ಬಂಧಿಸಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕಾಸಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆನಂದರಾವ್ ಕಾಳೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com