ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪಿತೃ ವಿಯೋಗ, ಅಂತ್ಯಸಂಸ್ಕಾರಕ್ಕೆ ಯೋಗಿ ಗೈರು!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ ಸೋಮವಾರ ಬೆಳಗ್ಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪಿತೃ ವಿಯೋ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪಿತೃ ವಿಯೋ

ಲಕ್ನೋ:  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ ಸೋಮವಾರ ಬೆಳಗ್ಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಬೆಳಗ್ಗೆ 10.44ರ ಸುಮಾರಿಗೆ ಆನಂದ್‌ ಸಿಂಗ್ ಅವರು ಕೊನೆಯುಸಿರೆಳೆದರು ಎಂದು ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವನೀಶ್‌ ಅವಶ್ತಿ ದೃಢಪಡಿಸಿದ್ದಾರೆ.

ಗಂಭೀರ ಅನಾರೋಗ್ಯದಿಂದಿದ್ದ ಸಿಂಗ್‌ ಅವರು ಮಾರ್ಚ್ 15ರಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಕಳೆದ ರಾತ್ರಿ ಏಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು.

ರಾಜ್ಯದಲ್ಲಿ ಕೊರೋನಾ ಪ್ರಭಾವ ಹೆಚ್ಚಾಗಿದ್ದು, ವೈರಸ್ ವಿರುದ್ಧ ಹೋರಾಡಲು ಲಾಕ್'ಡೌನ್ ಕಠಿಣವಾಗಿ ಜಾರಿ ಮಾಡುವ ಅಗತ್ಯವಿದೆ. ಹೀಗಾಗಿ ಮಂಗಳವಾರ ನಡೆಯಲಿರುವ ತಂದೆಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗುವುದಿಲ್ಲ ಎಂದು ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com