ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆರೋಪ ಮಾಡಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಪಾಲ್ಘರ್ ನಲ್ಲಿ ಸಾಧುಗಳನ್ನು ಗ್ರಾಮಸ್ಥರೇ ಥಳಿಸಿ ಹತ್ಯೆ ಮಾಡಿದ್ದು ಈ ಪ್ರಕರಣ ಸಂಬಂಧ ಸೋನಿಯಾ ಗಾಂಧಿ ವಿರುದ್ಧ ಅರ್ನಾಬ್ ಗೋಸ್ವಾಮಿ ಆರೋಪ ಮಾಡಿದ್ದು ಈ ಹಿನ್ನೆಲೆಯಲ್ಲಿ ಛತ್ತೀಸಗಢದ ರಾಯ್ ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಸೋನಿಯಾ ಗಾಂಧಿ ವಿರುದ್ಧ ಪಾಲ್ಘರ್ ಪ್ರಕರಣದ ಆರೋಪ ಹೊರಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದು ಅರ್ನಾಬ್ ಗೋಸ್ವಾಮಿ ವಿರುದ್ಧ ದೂರು ದಾಖಲಿಸಿದ್ದರು. ಇದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಆನ್ ಲೈನ್ ಅಭಿಯಾನವನ್ನು ಪ್ರಾರಂಭಿಸಿದೆ.
Advertisement