ಅರ್ನಬ್ ಗೋಸ್ವಾಮಿ ಮೇಲೆ ದಾಳಿ: ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ತೀವ್ರ ಖಂಡನೆ

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಪ್ರಕರಣವನ್ನು ಕೇಂದ್ರದ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಪ್ರಕಾಶ್ ಜವಡೇಕರ್ ಅವರು ಗುರುವಾರ ತೀವ್ರವಾಗಿ ಖಂಡಿಸಿದ್ದಾರೆ. 
ಪ್ರಕಾಶ್ ಜವಡೇಕರ್
ಪ್ರಕಾಶ್ ಜವಡೇಕರ್

ನವದೆಹಲಿ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಪ್ರಕರಣವನ್ನು ಕೇಂದ್ರದ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಪ್ರಕಾಶ್ ಜವಡೇಕರ್ ಅವರು ಗುರುವಾರ ತೀವ್ರವಾಗಿ ಖಂಡಿಸಿದ್ದಾರೆ. 

ಇಂತಹ ದಾಳಿಗಳು ಪ್ರಜಾಪ್ರಭುತ್ವಕ್ಕ ವಿರುದ್ಧವಾದದ್ದು. ಹೆಸರಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ಮೇಲೆ ನಡೆದ ದಾಳಿಯನ್ನು  ನಾವು ತೀವ್ರವಾಗಿ ಖಂಡಿಸುತ್ತೇವೆ. ಯಾವುದೇ ಪತ್ರಕರ್ತ ಮೇಲೆ ನಡೆಯುವ ದಾಳಿಯನ್ನೂ ನಾವು ಖಂಡಿಸುತ್ತೇವೆ.  ಏಕೆಂದರೆ, ಇಂತಹ ದಾಳಿಗಳು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. 

ಸಹನೆ ಬೇಧಿಸುವವರೇ ಅಸಹಿಷ್ಣುತೆ ಹಾದಿ ಹಿಡಿಯುತ್ತಿರುವುದು ನಿಜಕ್ಕೂ ವಿಪರ್ಯಾಸದ ಸಂಗತಿ. ಕಾನೂನು ಪ್ರಕಾರ ಪೊಲೀಸರು ಖಂಡಿತವಾಗಿಯೂ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com