ಲಖನೌ: ಕೊರೋನಾವೈರಸ್ ಹಾವಳಿಯ ಕಾರಣ ಜೂನ್ 30 ರವರೆಗೆ ರಾಜ್ಯದಲ್ಲಿ ಯಾವುದೇ ಸಾರ್ವಜನಿಕ ಸಮಾರಂಭ, ಸಮಾವೇಶಗಳಿಗೆ ಅವಕಾಶ ನೀಡಬಾರದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
"ಜೂನ್ 30 ರವರೆಗೆ ಯಾವುದೇ ಸಾರ್ವಜನಿಕ ಕೂಟಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಪರಿಸ್ಥಿತಿಗೆ ಅನುಗುಣವಾಗಿ ಹೆಚ್ಚಿನ ನಿರ್ಧಾರ ತೆಗೆದುಕೊಳ್ಳಲಾಗುವುದು" ಸಿಎಂ ಯೋಗಿ ಆದಿತ್ಯನಾಥ್ ಕಚೇರಿ ಟ್ವೀಟ್ ಮಾಡಿದೆ.
ಕೋವಿಡ್ -19 ಪರಿಸ್ಥಿತಿ ಕುರಿತು ಸಿಎಂ ರಾಜ್ಯದ 11 ಸಮಿತಿಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಬಳಿಕ ಈ ತೀರ್ಮಾನ ತೆಗೆದುಕೊಂಡಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಉತ್ತರ ಪ್ರದೇಶದಲ್ಲಿ 1,621 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದುವರೆಗೆ 247 ರೋಗಿಗಳು ಗುಣಮುಖವಾಗಿದ್ದಾರೆ.ಒಟ್ಟಾರೆ 25 ಮಂದಿ ಸಾವನ್ನಪ್ಪಿದ್ದಾರೆ.
Advertisement