ಜಮ್ಮು ಮತ್ತು ಕಾಶ್ಮೀರ: ಕುಲ್ಗಾಮ್ ಎನ್ ಕೌಂಟರ್ ನಲ್ಲಿ 4 ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!

ಕೊರೋನಾ ವೈರಸ್ ಆರ್ಭಟದ ನಡುವೆಯೇ ತಮ್ಮ ಆರ್ಭಟ ತೋರಲು ಮುಂದಾಗಿದ್ದ 4 ಉಗ್ರರನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದೆ.
ಸೇನಾ ಕಾರ್ಯಾಚರಣೆ
ಸೇನಾ ಕಾರ್ಯಾಚರಣೆ

ಶ್ರೀನಗರ: ಕೊರೋನಾ ವೈರಸ್ ಆರ್ಭಟದ ನಡುವೆಯೇ ತಮ್ಮ ಆರ್ಭಟ ತೋರಲು ಮುಂದಾಗಿದ್ದ 4 ಉಗ್ರರನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದೆ.

ಹೌದು.. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ನಾಲ್ಕು ಉಗ್ರರನ್ನು ಭಾರತೀಯ ಸೇನೆ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಿದ್ದಾರೆ.

ಇಂದು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗುಡ್ಡರ್ ಪ್ರಾಂತ್ಯದಲ್ಲಿ ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನೆ, ಸ್ಥಳೀಯ ಪೊಲೀಸರೊಂದಿಗೆ ಸೇರಿ ಕಾರ್ಯಾಚರಣೆ ಆರಂಭಿಸಿದ್ದು. ಸೇನೆಯ ಸಿಆರ್ ಪಿಎಫ್ ಯೋಧರು ಮತ್ತು ಸ್ಥಳೀಯ ಪೊಲೀಸರು ಜಂಟಿ  ಕಾರ್ಯಾಚರಣೆ ನಡೆಸಿದರು. ಸೇನೆ ಆಗಮಿಸುತ್ತಿದ್ದಂತೆಯೇ ಉಗ್ರರು ಸೈನಿಕರತ್ತ ಗುಂಡಿನ ಸುರಿಮಳೆ ಗರೆದರು. ಈ ವೇಳೆ ಪ್ರತಿದಾಳಿ ನಡೆಸಿದ ಸೇನೆ ನಾಲ್ಕು ಉಗ್ರರನ್ನು ಹೊಡೆದುರುಳಿಸಿದೆ.

ಪ್ರಸ್ತುತ ಘಟನಾ ಪ್ರದೇಶದಲ್ಲಿ ಸೇನೆ ಶೋಧ ಕಾರ್ಯಾಚರಣೆ ನಡೆಸಿದ್ದು, ಮೃತ ಉಗ್ರರು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬುದು ಇನ್ನಷ್ಟೇ ಪತ್ತೆಯಾಗಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com