ನವದೆಹಲಿ: ಕೊರೋನಾವೈರಸ್ ಲಾಕ್ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸಬ್ಸಿಡಿ ಆಹಾರ ಧಾನ್ಯವನ್ನು ಪಡೆಯಲು ಸಾಧ್ಯವಾಗುವಂತೆ'ಒಂದು ರಾಷ್ಟ್ರ, ಒಂದು ಪಡಿತರ ಚೀಟಿ' ಯೋಜನೆಯನ್ನು 'ತಾತ್ಕಾಲಿಕವಾಗಿ' ಅಳವಡಿಸಿಕೊಳ್ಳುವ ಕುರಿತು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರವ ಸರ್ಕಾರಕ್ಕೆ ಕೇಳಿದೆ. ಕೇಂದ್ರ ಸರ್ಕಾರದ ಈ ಯೋಜನೆ ಇದೇ ವರ್ಷ ಜೂನ್ ನಿಂದ ಜಾರಿಗೆ ತರಲು ಉದ್ದೇಶಿಸಲಾಗಿತ್ತು.
ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯಪೀಠ ಸೋಮವಾರ ಹೊರಡಿಸಿದ ಆದೇಶದಲ್ಲಿ "ಈ ಹಂತದಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸುವುದು ಸಾಧ್ಯವಿದೆಯೆ ಅಥವಾ ಇಲ್ಲವೆಎಂಬುದನ್ನು ಪರಿಗಣಿಸಲು ನಾವು ಕೇಂದ್ರ ಸರ್ಕಾರವನ್ನು ಕೇಳುತ್ತಿದ್ದೇವೆ,ಪ್ರಸ್ತುತ ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಲಬೇಕಿದೆ" ಎಂದು ಹೇಳಲಾಗಿದೆ.
ರಾಷ್ಟ್ರವ್ಯಾಪಿ ಲಾಕ್ಡೌನ್ ನಿಂದಾಗಿ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ಫಲಾನುಭವಿಗಳು ಮತ್ತು ಇತರ ರಾಜ್ಯಗಳ ನಾಗರಿಕರ ಅನುಕೂಲಕ್ಕಾಗಿ ಈ ಯೋಜನೆಯನ್ನು ಪ್ರಾರಂಭಿಸಲು ಕೋರಿ ವಕೀಲ ರೀಪಕ್ ಕನ್ಸಾಲ್ ಸಲ್ಲಿಸಿದ್ದ ಮನವಿಯನ್ನು ಉನ್ನತ ನ್ಯಾಯಾಲಯ ವಿಚಾರಣೆ ನಡೆಸಿದ್ದು . ಸ್ಥಳೀಯ ಗುರುತಿನ ಚೀಟಿಗಳು ಅಥವಾ ಯಾವುದೇ ಗುರುತಿನ ಚೀಟಿಗಳ ಬೇಡಿಕೆ ಇರುವ ಕಾರಣ ಪ್ರಸ್ತುತ ತಾತ್ಕಾಲಿಕ ವಸತಿ ಶಿಬಿರಗಳಲ್ಲಿ ನೆಲೆಸಿರುವ ವಲಸೆ ಕಾರ್ಮಿಕರು ಹಸಿವಿನಿಂದ ಬಳಲುವಂತಾಗಿದೆ. ಹಾಗಾಗಿ ಅವರ ಹಸಿವು ನೀಗಿಸುವಿಕೆ ಖಚಿತಪಡಿಸಿಕೊಳ್ಲಲು ನ್ಯಾಯಾಲಯವು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ಕೋರಿದೆ.
Advertisement