ಆರ್ ಎಸ್ಎಸ್ 30 ವರ್ಷಗಳಿಂದ ಈ ದಿನಕ್ಕಾಗಿ ಕೆಲಸ ಮಾಡುತ್ತಿತ್ತು: ಮೋಹನ್ ಭಾಗ್ವತ್

ರಾಷ್ಟ್ರೀಯ ಸ್ವಯಂ ಸೇವಕ ದಳ ಕಳೆದ 30 ವರ್ಷಗಳಿಂದ ಈ ದಿನಕ್ಕಾಗಿ ಕೆಲಸ ಮಾಡುತ್ತಿತ್ತು. ಸ್ವಯಂ ಸೇವಕರ ಕನಸು ಇದೀಗ ನನಸಾಗಿದ್ದು ಭವ್ಯ ಭಾರತದ ಶ್ರೀಮಂತ ಸಂಸ್ಕೃತಿ ಸಾರುವ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.
ಮೋಹನ್ ಭಾಗ್ವತ್
ಮೋಹನ್ ಭಾಗ್ವತ್

ಅಯೋಧ್ಯೆ: ರಾಷ್ಟ್ರೀಯ ಸ್ವಯಂ ಸೇವಕ ದಳ ಕಳೆದ 30 ವರ್ಷಗಳಿಂದ ಈ ದಿನಕ್ಕಾಗಿ ಕೆಲಸ ಮಾಡುತ್ತಿತ್ತು. ಸ್ವಯಂ ಸೇವಕರ ಕನಸು ಇದೀಗ ನನಸಾಗಿದ್ದು ಭವ್ಯ ಭಾರತದ ಶ್ರೀಮಂತ ಸಂಸ್ಕೃತಿ ಸಾರುವ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿದ ಬಳಿಕ ಮಾತನಾಡಿದ ಅವರು, 'ಎಲ್ಲರೂ ರಾಮರೇ, ಎಲ್ಲರಲ್ಲೂ ರಾಮನೇ ಇದ್ದಾನೆ. ರಾಮ ಮಂದಿರನವನ್ನು ಇಲ್ಲಿಯೇ ಕಟ್ಟೋಣ. ನಮ್ಮ ಹೃದಯಗಳನ್ನು ಅಯೋಧ್ಯೆ ಮಾಡಿಕೊಳ್ಳೋಣ ಎಂದು ಹೇಳಿದರು. ಅಂತೆಯೇ 'ಧರ್ಮ ಎಲ್ಲರನ್ನೂ ಮೇಲ್ಮೆಗೆ ತರುತ್ತದೆ. ವಿಶ್ವಕ್ಕೇ ಭಾರತವು ಸುಖ ಶಾಂತಿ ತರಬಲ್ಲದು. ನಾವು ಭಾರತೀಯರು ವಸುದೈವ ಕುಟುಂಬಕಂ ಎಂಬ ಮಾತಿನಲ್ಲಿ ನಂಬಿಕೆ ಇಟ್ಟಿದ್ದೇವೆ. ಇಡೀ ವಿಶ್ವವೇ ಒಂದು ಕುಟುಂಬವಾಗಿದ್ದು, ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ. ಇಂದು ನವ ಭಾರತದ ಆರಂಭವಾಗಿದೆ. ನಾವು ಅಯೋಧ್ಯೆಯಲ್ಲಿ ಮಂದಿರ ಕಟ್ಟಿ ಸುಮ್ಮನಾಗಬಾರದು. ಅದಕ್ಕೂ ಮೊದಲು ಮನ ಮಂದಿರ ಕಟ್ಟಬೇಕು. ಅತಿ ಆಸೆ, ವಿಪರೀತ ಸಿಟ್ಟು, ಜಿಪುಣತನದಂಥ ಸಮಾಜಕಂಟಕ ಸ್ವಭಾಗಳನ್ನು ದೂರವಿಡಲು ರಾಮನ ಆದರ್ಶಗಳಿಂದ ಸ್ಪೂರ್ತಿ ಪಡೆಯೋಣ ಎಂದು ಹೇಳಿದರು.

'ಇದು ನನಗೆ ಅತ್ಯಂತ ಆನಂದದ ದಿನ. ಈ ಹಿಂದೆ ನಮ್ಮ ಸರಸಂಘ ಚಾಲಕರಾಗಿದ್ದ ಬಾಳಾಸಾಹೇಬ್ ದೇವರಸರು ‘ಈ ಕೆಲಸವನ್ನು ವರ್ಷಗಟ್ಟಲೆ ಮಾಡಬೇಕು’ ಎಂದು ಹೇಳಿದ್ದರು. ಅದೇ ರೀತಿ ನಾವು ನಡೆದುಕೊಂಡೆವು. ಸಾವಿರಾರು ಮಂದಿ ಈ ಕಾರ್ಯಕ್ಕಾಗಿ ಬಲಿದಾನ ಮಾಡಿದ್ದರು. ಅವರೆಲ್ಲರನ್ನೂ ನಾನು ನೆನಪಿಸಿಕೊಳ್ಳುತ್ತೇನೆ. ಅಡ್ವಾಣಿ ಅವರು ಈ ಕಾರ್ಯಕ್ರಮವನ್ನು ತಮ್ಮ ನಿವಾಸದಲ್ಲಿ ನೋಡುತ್ತಿರಬಹುದು. ಸಾಕಷ್ಟು ನಾಯಕರಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಿಲ್ಲ. ಪರಿಸ್ಥಿತಿಯೇ ಹಾಗಿದೆ. ಕೊರೋನಾ ಕಾಲದಿಂದ ವಿಶ್ವ ಅಂತರ್ಮುಖಿಯಾಗಿದೆ. ಏನಾದರೂ ದಾರಿಯಿದೆಯೇ ಎಂದು ಎದುರು ನೋಡುತ್ತಿದೆ. ನಮಗೆ ವಿಶ್ವಾಸವಿದೆ. ರಾಮನ ಹಾದಿಯಲ್ಲಿ ಪರಿಹಾರವಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com