ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್ ನ ಬಿಕ್ಕಟ್ಟು ಶಮನಗೊಂಡು ವಿಧಾನಸಭೆಯ ಅಧಿವೇಶನ ನಡೆಯುವುದಕ್ಕೂ ಮುನ್ನ ರಾಜಸ್ಥಾನದ ರಾಜ್ಯಪಾಲರನ್ನು ಬಿಜೆಪಿ ನಾಯಕಿ ವಸುಂಧರಾ ರಾಜೆ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ರಾಜಭವನದ ವಕ್ತಾರರು ವಸುಂಧರಾ ರಾಜೆ-ಕಲ್ ರಾಜ್ ಮಿಶ್ರಾ ಅವರ ಭೇಟಿ ಸೌಜನ್ಯದ ಭೇಟಿಯಾಗಿತ್ತು ಎಂದು ಹೇಳಿದ್ದಾರೆ.
ಆ.14 ರಿಂದ ರಾಜಸ್ಥಾನದಲ್ಲಿ ವಿಧಾನಸಭೆ ಅಧಿವೇಶನ ನಡೆಯಲಿದೆ. ಇದಕ್ಕೂ ಮುನ್ನ ರಾಜೆ ಅವರು ಬಿಜೆಪಿ ಶಾಸಕಾಂಗ ಸಭೆ ನಡೆಸಿದ್ದರು.
Advertisement