ಮುಂಬೈ: ಮಹಾರಾಷ್ಟ್ರ ಸಹಕಾರ ಸಚಿವ ಬಾಳಾಸಾಹೇಬ್ ಪಾಟೀಲ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕರಡ್ ನಲ್ಲಿರುವ ಆಸ್ಪತ್ರೆಯಲ್ಲಿ ಸಚಿವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಟೀಲ್ ಅವರ ಕಚೇರಿ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಶುಕ್ರವಾರದಂದು ರಾತ್ರಿ ಕೃಷ್ಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.
ಸಚಿವರ ಆರೋಗ್ಯ ಸ್ಥಿರವಾಗಿದ್ದು, ಆತಂಕಪಡುವಂತಹದ್ದೇನು ಇಲ್ಲ ಎಂದು ಸಚಿವರ ಪುತ್ರ ಮಾಹಿತಿ ನೀಡಿದ್ದಾರೆ. ಸತಾರಾ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಪಾಟೀಲ್ ಅವರು ತಮ್ಮೊಂದಿಗೆ ಸಂಪರ್ಕದಲ್ಲಿದ್ದವರು ಪರೀಕ್ಷೆಗೊಳಪಡಬೇಕೆಂದು ವಿನಂತಿಸಿದ್ದಾರೆ.
Advertisement